31
March, 2026

A News 365Times Venture

31
Tuesday
March, 2026

A News 365Times Venture

ಕೇರಳ ಸಿಎಂ ಭೇಟಿ: ಕಾಸರಗೋಡು ಕನ್ನಡಿಗರ ಸಮಸ್ಯೆ ಶೀಘ್ರ ಪರಿಹಾರಕ್ಕೆ ಮನವಿ

Date:

ಕಾಸರಗೂಡು,ಸೆಪ್ಟಂಬರ್,16,2025 (www.justkannada.in): ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಶೈಕ್ಷಣಿಕ ಹಾಗೂ ಉದ್ಯೋಗ ಸಂಬಂಧಿತ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಸಲ್ಲಿಸಲಾಯಿತು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ, ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಎ.ಆರ್. ಸುಬ್ಬಯ್ಯ ಕಟ್ಟೆ, ಸದಸ್ಯರು, ಗಡಿ ಪ್ರಾಧಿಕಾರ ಹಾಗೂ ಇತರೆ ಕನ್ನಡಿಗರು ಉಪಸ್ಥಿತರಿದ್ದರು.

ಹಾಗೆಯೇ ಇದೇ ವೇಳೆ ಬದಿಯಡ್ಕದ ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಸಾಂಸ್ಕೃತಿಕ ಭವನದ ಉದ್ಘಾಟನೆಗೆ ಕೇರಳದ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದರು.  ಇದೇ ಸಂದರ್ಭದಲ್ಲಿ ಕೇರಳ ವಿಧಾನಸಭೆಯ ಸ್ಪೀಕರ್  ಶಂಶೀರ್  ಹಾಗೂ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕವಿ.ಡಿ ಸತೀಶನ್ ಅವರನ್ನು ಭೇಟಿ  ಮಾಡಿದರು.

ಸಿಎಂ ಪಿಣರಾಯಿ ವಿಜಯನ್ ಅವರ  ಭೇಟಿ ವೇಳೆ ಕಾಸರಗೋಡು ಕನ್ನಡಿಗರ ಪ್ರಮುಖ ಬೇಡಿಕೆಗಳಾದ ರಾಷ್ಟ್ರೀಯ ಹೆದ್ದಾರಿ/ ರೇಲ್ವೆ ಸ್ಟೇಷನ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ, ಕೇರಳದ ನೇಮಕಾತಿಗಳಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ನಿಯಮಾನುಸಾರ ಮೀಸಲಾತಿ, ರೇಶನ್‌ ಕಾರ್ಡ್‌/ಮತದಾರರ ಗುರುತಿನ ಚೀಟಿಗಳಲ್ಲಿ ಕನ್ನಡ ಭಾಷೆ ಅಳವಡಿಕೆ, ಬದಿಯಡ್ಕದ ಕಯ್ಯಾರ ಕಿಯ್ಯಣ್ಣ ರೈ ಕನ್ನಡ ಭವನಕ್ಕೆ ರಸ್ತೆ ಸಂಪರ್ಕ, ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ, ಕಾಸರಗೋಡು ಜಿಲ್ಲೆಗಳಿಗೆ ಕಡ್ಡಾಯವಾಗಿ ಕನ್ನಡ ಶಿಕ್ಷಕರ ನೇಮಕ, ಪ್ರಭಾಕರನ್‌ ಕಮಿಟಿ ವರದಿ ಅನುಷ್ಠಾನ, ಕಾಸರಗೋಡು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಇತ್ಯಾದಿ ಬೇಡಿಕೆಗಳನ್ನ ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು.

Key words:  Kerala CM, Kasaragodu Kannadiga, Border development authority

The post ಕೇರಳ ಸಿಎಂ ಭೇಟಿ: ಕಾಸರಗೋಡು ಕನ್ನಡಿಗರ ಸಮಸ್ಯೆ ಶೀಘ್ರ ಪರಿಹಾರಕ್ಕೆ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು,ಮಾರ್ಚ್,31,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ...

മഞ്ചേശ്വരത്ത് സ്ഥാനാര്‍ത്ഥിയെ നിര്‍ത്തിയത് എസ്.ഡി.പി.ഐയുടെ തന്ത്രം; വിമര്‍ശനം നടത്തിയത് തന്റെ വീഴ്ച; ഖേദം പ്രകടിപ്പിച്ച് തുളസീധരന്‍ പള്ളിക്കല്‍

കോഴിക്കോട്: മഞ്ചേശ്വരം മണ്ഡലത്തില്‍ എസ്.ഡി.പി.ഐ സ്ഥാനാര്‍ത്ഥിയെ നിര്‍ത്തിയത് ബി.ജെ.പിക്ക് സഹായകരമാകുമെന്ന പ്രസ്താവന...

`ஹார்முஸ் ஜலசந்தியை திறப்பதெல்லாம் இருக்கட்டும்; அதை விட…'- ஈரான் போரில் ட்ரம்ப்-ன் அடுத்த பிளான்?

ஈரான் போர் ஐந்தாவது வாரமாக நடந்து கொண்டிருக்கிறது. இது இந்தப் போரில்...

Trump-Bangladesh: మాకు రష్యా చమురు కొనుగోలుకు అనుమతివ్వండి.. ట్రంప్‌కు బంగ్లాదేశ్ విజ్ఞప్తి

పశ్చిమాసియా యుద్ధం కారణంగా ప్రపంచ దేశాల్లో చమురు, గ్యాస్ సంక్షోభం తలెత్తింది....