30
March, 2026

A News 365Times Venture

30
Monday
March, 2026

A News 365Times Venture

ಜಾತಿ ಗಣತಿಯಲ್ಲಿ ಯಾವುದೇ ಗೊಂದಲ, ಸಮಸ್ಯೆ ಇಲ್ಲ- ಸಚಿವ ಮಧು ಬಂಗಾರಪ್ಪ

Date:

ಮೈಸೂರು,ಸೆಪ್ಟಂಬರ್,23,2025 (www.justkannada.in): ಜಾತಿ ಗಣತಿಯಲ್ಲಿ ಯಾವುದೇ ಗೊಂದಲ. ಸಮಸ್ಯೆಗಳಿಲ್ಲ. ಆದರೆ ಬಿಜೆಪಿಯವರು ವಿನಃ ಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ 2025 ಅಂಗವಾಗಿ ಕಲಾಮಂದಿರದಲ್ಲಿ ಆಯೋಜಿಸಿರುವ  ಮಕ್ಕಳ ದಸರಾವನ್ನು ದೀಪ ಬೆಳಗುವ ಮೂಲಕ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಇದೇ ವೇಳೆ ಎಂ.ಎಲ್ .ಸಿ ಎನ್  ಮಂಜೇಗೌಡ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಬಳಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ನಾವು ಮಾಡುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಕೊಳ್ಳಬೇಕಲ್ವಾ. ಅದಕ್ಕಾಗಿ ಈ ಸಮೀಕ್ಷೆ ನಡೆಯುತ್ತಿದೆ. ನಿನ್ನೆಯಿಂದಷ್ಟೇ ಆರಂಭವಾಗಿದೆ. ಎಲ್ಲಿಯೂ ಏನು ಸಮಸ್ಯೆ ಉಂಟಾಗಿಲ್ಲ. ಖುದ್ದು ನಾನೇ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಎಲ್ಲಾ ಕಡೆಯೂ ಚೆನ್ನಾಗಿ ನಡೆಯುತ್ತಿದೆ. ಬಿಜೆಪಿಯವರು ವಿನಃ ಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜಾತಿ ಗಣತಿ ಮಾಡುತ್ತಿರುವುದು ಕೇಂದ್ರ ಸರ್ಕಾರ ಎಂದರು.

ಕೇಂದ್ರದಿಂದ ಜಿಎಸ್ ಟಿ ಪರಿಷ್ಕರಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಕೇಂದ್ರ ಸರ್ಕಾರ ಈಗ ಎಲ್ಲರಿಗೂ ಜಿಎಸ್ ಟಿ ಲಡ್ಡು ತಿನ್ನಿಸುತ್ತಿದೆ. ಜಿಎಸ್ಟಿ ಹೊಸ ನೀತಿಯಿಂದ ದೊಡ್ಡ ಬದಲಾವಣೆ ಆಗುತ್ತಿಲ್ಲ. ಜಿಎಸ್ ಟಿ ಹೊರೆ ಕಮ್ಮಿ ವಿಚಾರವನ್ನು ನೋಡುವುದಾದರೆ ರಾಜ್ಯದ ಮಟ್ಟಿಗೆ ತಲಾ 57 ರೂ  ಅಷ್ಟೇ. ಆದರೆ ಸಿದ್ದರಾಮಯ್ಯ ನವರು ಪ್ರತಿ ತಿಂಗಳು 2 ಸಾವಿರ ಕೊಡುತ್ತಿದ್ದಾರೆ. 200 ಯುನಿಟ್ ವಿದ್ಯುತ್ ನೀಡಿ ಮನೆ ಬೆಳಗುತ್ತಿದ್ದಾರೆ.  ಜಿಎಸ್ ಟಿ ಪಾಲು ರಾಜ್ಯಕ್ಕೆಷ್ಟು ಕಡಿಮೆ ಸಿಗುತ್ತಿದದೆ ಎಂದು ಚಿಂತನೆ ಮಾಡಬೇಕು. ಇದರ ಬಗ್ಗೆ ನಮ್ಮ ಸಂಸದರು ಧ್ವನಿ ಎತ್ತದೆ ಇರುವುದು ಬೇಸರ ತಂದಿದೆ. GST ಲಡ್ಡು ಕೇವಲ ಬಿಜೆಪಿಗರಿಗಷ್ಟೇ ಸಿಹಿಯಾಗಿದೆ, ಆದರೆ ರಾಜ್ಯದ ಜನರಿಗೆ ಕಹಿಯಾಗಿದೆ ಎಂದರು.

Key words: no confusion, caste census, Minister, Madhu Bangarappa, Mysore

The post ಜಾತಿ ಗಣತಿಯಲ್ಲಿ ಯಾವುದೇ ಗೊಂದಲ, ಸಮಸ್ಯೆ ಇಲ್ಲ- ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್...

മനുഷ്യരുടെ എല്ലാ വോട്ടും വേണം, മതവര്‍ഗീയതയോട് യോജിപ്പില്ല; എസ്.ഡി.പി.ഐ വോട്ട് സ്വീകരിക്കുമോ എന്ന ചോദ്യത്തില്‍ ബിനോയ് വിശ്വം

കൊച്ചി: എല്ലാ മനുഷ്യരുടെയും വോട്ടുകള്‍ സ്വീകരിക്കുമെന്നും എന്നാല്‍ മതവര്‍ഗീയ സംവിധാനങ്ങളോട് ആശയപരമായി...

தேர்தல்: 'தனித்தொகுதி' Vs 'பொதுத்தொகுதி' – என்ன கணக்கு… எப்படி உருவானது?!

தமிழகத்தில் சட்டமன்றத் தேர்தல் திருவிழா களைகட்டத் தொடங்கிவிட்டது. அரசியல் கட்சிகளுக்கு இடையிலான...

Weight Loss Drugs: రూ.450తోనే బరువు తగ్గొచ్చు..! వైద్యుల వార్నింగ్..

Weight Loss Drugs: భారతదేశంలో బరువు తగ్గించే సెమాగ్లుటైడ్ మందు ఇప్పుడు...