28
March, 2026

A News 365Times Venture

28
Saturday
March, 2026

A News 365Times Venture

ಬಿಹಾರ ವಿಧಾನಸಭೆ ರಿಸಲ್ಟ್ ಬಳಿಕ ಸಂಪುಟ ಪುನಾರಚನೆ ಚರ್ಚೆ- ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ, ಅಕ್ಟೋಬರ್, 11,2025 (www.justkannada.in):  ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿ ನಿರ್ಧರಿಸಲಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಸಂಪುಟ ಪುನಾರಚನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಪಕ್ಷ ವರಿಷ್ಠರು ಚರ್ಚೆ ಮಾಡಿ ನಿರ್ಧರಿಸುತ್ತಾರೆ.  ಕಾಂಗ್ರೆಸ್‌‍ನ 138 ಮಂದಿ ಶಾಸಕರು ಸಚಿವರಾಗಬೇಕೆಂಬ ಆಕಾಂಕ್ಷೆ ಹೊಂದಿರುತ್ತಾರೆ. ಆದರೆ 34 ಮಂದಿಗೆ ಮಾತ್ರ ಅವಕಾಶವಿದೆ. ಸಂಪುಟ ಪುನಾರಚನೆಯ ವೇಳೆ ಯಾರನ್ನು ತೆಗೆಯುತ್ತಾರೋ ಗೊತ್ತಿಲ್ಲ. ಸಚಿವರನ್ನ ಕೈಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

ಅ.13 ರಂದು ಸಿಎಂ ಸಿದ್ದರಾಮಯ್ಯರಿಂದ ಔತಣ ಕೂಟ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಸಚಿವರು ಜಿಲ್ಲೆಗಳಲ್ಲಿ ಯಾವ ರೀತಿಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿರ್ವಹಿಸುತ್ತಿರುವ ಜವಾಬ್ದಾರಿ ಬಗ್ಗೆ ಚರ್ಚೆ ಮಾಡಲು ಸಚಿವರ ಔತಣ ಕೂಟ ಆಯೋಜಿಸಿದ್ದಾರೆ. ಇದನ್ನು ಬೇರೆ ರೀತಿ ಬಿಂಬಿಸಬಾರದು ಎಂದರು.

Key words: Cabinet, Restructure, Minister, Chaluvarayaswamy

The post ಬಿಹಾರ ವಿಧಾನಸಭೆ ರಿಸಲ್ಟ್ ಬಳಿಕ ಸಂಪುಟ ಪುನಾರಚನೆ ಚರ್ಚೆ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനിലെ കരയുദ്ധം അമേരിക്കയെ ചെളിക്കുണ്ടിലാക്കും; വിയറ്റ്നാം ആവര്‍ത്തിക്കുമെന്ന മുന്നറിയിപ്പുമായി റഷ്യ

മോസ്‌കോ: ഇറാനെതിരായ ഏതൊരാക്രമണത്തിന്റെയും വിധി പരാജയമായിരിക്കുമെന്ന് അമേരിക്കയ്ക്ക് മുന്നറിയിപ്പുമായി റഷ്യന്‍ സുരക്ഷാ...

நாமக்கல்: `தொகுதி வேட்பாளரை மாற்ற வேண்டும்'- தங்கமணிக்கு எதிராக கட்சி நிர்வாகிகள் போர்க்கொடி

நாமக்கல் மாவட்டத்தில் முன்னாள் அமைச்சர் தங்கமணிக்கு எதிராக கட்சி நிர்வாகிகள் போர்க்கொடி...

India Receives Good News Amid Conflict: యుద్ధం మధ్యలో భారత్‌కు శుభవార్త..

India Receives Good News Amid Conflict: మధ్యప్రాచ్యంలో కొనసాగుతున్న యుద్ధ...

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್...