ಬೆಂಗಳೂರು,ಅಕ್ಟೋಬರ್,23,2025 (www.justkannada.in): ಭವಿಷ್ಯದ ಅಹಿಂದ ನಾಯಕತ್ವದ ಬಗ್ಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ , ಯತೀಂದ್ರ ಹೇಳಿಕೆ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲ್ಲ. ಹೇಳಿಕೆಯ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಬೆಂಗಳೂರು ವ್ಯಾಪ್ತಿಯಲ್ಲಿ ಕಸ ರಸ್ತೆಗುಂಡಿಗಳ ಸಮಸ್ಯೆ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಗರ ಪ್ರದಕ್ಷಣೆಗೆ ಮುಂದಾಗಿದ್ದಾರೆ. ಬೆಂಗಳೂರು ದಕ್ಷಿಣ ಪಾಲಿಕೆ ವ್ಯಾಪ್ತಿಯಲ್ಲಿ ಸಿಟಿ ರೌಂಡ್ಸ್ ಹಾಕುತ್ತಿದ್ದು ಡಿಕೆ ಡಿಕೆ ಶಿವಕುಮಾರ್ ಗೆ ಜಿಬಿಎ ಅಧಿಕಾರಿಗಳು ಸಾಥ್ ನೀಡಿದ್ದಾರೆ.
Key words: DCM, DK Shivakumar, discuss, MLC, Yatindra, statement
The post MLC ಯತೀಂದ್ರ ಹೇಳಿಕೆ ಬಗ್ಗೆ ಚರ್ಚಿಸುತ್ತೇನೆಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





