27
March, 2026

A News 365Times Venture

27
Friday
March, 2026

A News 365Times Venture

ರೇಷ್ಮೆ ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು- ಸಂಸದ ಡಾ. ಸಿ. ಎನ್. ಮಂಜುನಾಥ್

Date:

ಬೆಂಗಳೂರು,ಅಕ್ಟೋಬರ್,24,2025 (www.justkannada.in): “ರೇಷ್ಮೆ ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಾ. ಸಿ. ಎನ್. ಮಂಜುನಾಥ್ ನುಡಿದರು.

ಬೆಂಗಳೂರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿರುವ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಕೇಂದ್ರ ರೇಷ್ಮೆ ಮಂಡಳಿ – ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಡಾ. ಸಿ. ಎನ್. ಮಂಜುನಾಥ್ ರವರು ಭಾಗವಹಿಸಿ ಮಾತನಾಡಿದರು.

ರೇಷ್ಮೆ ಕೃಷಿ ನಮ್ಮ ದೇಶದ ಗ್ರಾಮೀಣ ಆರ್ಥಿಕತೆಗೆ ಆಧಾರವಾಗಿದ್ದು, ಅನೇಕ ಕುಟುಂಬಗಳಿಗೆ ಸ್ಥಿರ ಆದಾಯ ಮತ್ತು ಉದ್ಯೋಗದ ಮೂಲವಾಗಿದೆ ಎಂದು ಹೇಳಿದರು. ಅವರು ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಗುಣಮಟ್ಟದ ರೇಷ್ಮೆ ಉತ್ಪಾದನೆಗೆ ಮುಂದಾಗಬೇಕು, ಹೀಗೆ ಮಾಡಿದರೆ ರೈತರ ಆದಾಯ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಸೂಚಿಸಿದರು.

ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆಯ 50 ವರ್ಷಗಳ ಸಾಧನೆಯ ಈ ಸುವರ್ಣ ಕ್ಷಣದಲ್ಲಿ, ಕಳೆದ ಐದು ದಶಕಗಳಿಂದ ರೇಷ್ಮೆ ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಶ್ರಮ, ಪ್ರತಿಭೆ ಮತ್ತು ತ್ಯಾಗವನ್ನು ಅರ್ಪಿಸಿದ ಎಲ್ಲಾ ರೇಷ್ಮೆ ವಿಜ್ಞಾನಿಗಳು, ಅಧಿಕಾರಿಗಳು ಹಾಗೂ ರೇಷ್ಮೆ ಕೃಷಿಕರನ್ನು ಡಾ. ಮಂಜುನಾಥ್ ರವರು ಹೃದಯಪೂರ್ವಕವಾಗಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರು, ಪಿ. ಶಿವಕುಮಾರ್, (ಭಾ.ಆ.ಸೇ),ಸದಸ್ಯ (ಸಚಿವರು) ಮತ್ತು ಮುಖ್ಯ ಕಾರ್ಯನಿರ್ವಾಹಕರು, ಕೇಂದ್ರ ರೇಷ್ಮೆ ಮಂಡಳಿ, ಡಾ.ಎಸ್.ಮಂಥಿರಾಮೂರ್ತಿ, ನಿರ್ದೇಶಕರು (ತಾಂತ್ರಿಕ) ಮತ್ತು ನಿರ್ದೇಶಕರು, ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆ,ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯರು, ಇಡೀ ದೇಶದ ಅನೇಕ ವಿಜ್ಞಾನಿಗಳು ಹಾಗೂ ರೇಷ್ಮೆ ರೈತರು ಉಪಸ್ಥಿತರಿದ್ದರು.

Key words: Sericulture, backbone, rural economy, MP Dr. C. N. Manjunath

The post ರೇಷ್ಮೆ ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು- ಸಂಸದ ಡಾ. ಸಿ. ಎನ್. ಮಂಜುನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ

ನವದೆಹಲಿ,ಮಾರ್ಚ್,27,2026 (www.justkannada.in): ಬೆಲೆ ಏರಿಕೆ ಭೀತಿಯಲ್ಲಿದ್ದ ದೇಶದ ಜನರಿಗೆ ಕೇಂದ್ರ...

ഇറാന്റെ ഊര്‍ജ കേന്ദ്രങ്ങള്‍ ആക്രമിക്കില്ല; പത്ത്  ദിവത്തേയ്ക്ക് കൂടി വെടിനിര്‍ത്തലെന്ന് ട്രംപ്

വാഷിങ്ടണ്‍: ഇറാന്റെ ഊര്‍ജ കേന്ദ്രങ്ങള്‍ക്കെതിരായ ആക്രമണം 10 ദിവത്തേയ്ക്ക് കൂടി നിര്‍ത്തിവെയ്ക്കുകയാണന്ന്...

பாலியல் குற்றங்கள் குறித்து சர்ச்சை கருத்து: "மனப்பூர்வமான மன்னிப்பு"- எஸ்.வி.சேகர் வெளியிட்ட வீடியோ

நேற்று திண்டுக்கல்லில் நடைபெற்ற திருமணத்தில் கலந்துகொண்ட நடிகர் எஸ்.வி.சேகர் செய்தியாளர்களைச் சந்தித்தார்....