9
May, 2026

A News 365Times Venture

9
Saturday
May, 2026

A News 365Times Venture

ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ: 20 ಲಕ್ಷ ರೂ. ಪರಿಹಾರದ ಭರವಸೆ ನೀಡಿದ ಶಾಸಕ

Date:

ಚಿಕ್ಕಮಗಳೂರು,ಅಕ್ಟೋಬರ್,31,2025 (www.justkannada.in): ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ  ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ.

ಹರೀಶ್ (44) ಮತ್ತು ಉಮೇಶ್ (40)  ಕಾಡಾನೆ ದಾಳಿಗೆ ಬಲಿಯಾದವರು. ಇಬ್ಬರು ಸಹ ದೊಡ್ಡಪ್ಪ ಚಿಕ್ಕಪ್ಪನ ಮಕ್ಕಳಾಗಿದ್ದು ಸಹೋದರರಾಗಿದ್ದಾರೆ. ಇಬ್ಬರು ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದರು. ಈ ವೇಳೆ ಆನೆ ದಾಳಿ ನಡೆಸಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಶೃಂಗೇರಿ ಪೊಲೀಸರು, ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರು, ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

 ಸ್ಥಳಕ್ಕೆ ಶಾಸಕ ರಾಜೇಗೌಡ ಭೇಟಿ, ಪರಿಹಾರದ ಭರವಸೆ

ಘಟನೆ ಕುರಿತು ಮಾಹಿತಿ ಪಡೆದ ಶಾಸಕ ರಾಜೇಗೌಡ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಮೃತರ ಕುಟುಂಬಸ್ಥರಿಗೆ ಸರ್ಕಾರದಿಂದ 20 ಲಕ್ಷ ರೂ. ಪರಿಹಾರ ಕೊಡಿಸುವ ಭರವಸೆ ನೀಡಿದರು. ಹಾಗೆಯೇ ವೈಯಕ್ತಿಕ 2 ಲಕ್ಷ ಪರಿಹಾರ ಕೊಡುವುದಾಗಿ ಘೋಷಿಸಿದರು ಎನ್ನಲಾಗಿದೆ. ಇನ್ನು ಆನೆಯನ್ನ ಸೆರೆ ಹಿಡಿಯುವುದಾಗಿ ಭರವಸೆ ನೀಡಿದರು.

Key words: Two farmers, death, elephant, attack

The post ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ: 20 ಲಕ್ಷ ರೂ. ಪರಿಹಾರದ ಭರವಸೆ ನೀಡಿದ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അപകടകരമായ കളി, നിയമവാഴ്ച അട്ടിമറിക്കപ്പെടുന്നു’; വെളിപ്പെടുത്തലുകളുമായി ഐ.സി.സി ചീഫ് പ്രോസിക്യൂട്ടര്‍ കരീം ഖാന്‍

ഹേഗ്: അന്താരാഷ്ട്ര ക്രിമിനല്‍ കോടതിയെയും അതിന്റെ സ്വതന്ത്ര പ്രവര്‍ത്തനത്തെയും അട്ടിമറിക്കാന്‍ ലോക...

"ஆட்சி அமைக்கும் கட்சிக்கு எனது மனமார்ந்த நல்வாழ்த்துகள்" – எடப்பாடி பழனிசாமி

தமிழக சட்டமன்றத் தேர்தல் முடிவுகள் வெளியாகி சில நாட்கள் கடந்துள்ள நிலையில்...

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ...