18
March, 2026

A News 365Times Venture

18
Wednesday
March, 2026

A News 365Times Venture

ರೈತರ ಪ್ರತಿಭಟನೆಗೆ ಬೆಂಬಲ:  ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ

Date:

ಬೆಳಗಾವಿ,ನವೆಂಬರ್,5,2025 (www.justkannada.in):  ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಈ ನಡುವೆ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹೆದ್ದಾರಿ ತಡೆದು ಧರಣಿ ನಡೆಸಿದೆ.

ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಬೆಂಬಲ ನೀಡಿದ್ದು,  ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾರಿಗಳನ್ನು ನಿಲ್ಲಿಸಿ, ಲಾರಿ ಏರಿ  ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸರ್ಕಾರ ಕೂಡಲೇ ಟನ್ ಕಬ್ಬಿಗೆ 3500 ರೂಪಾಯಿ  ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Key words: Support, farmers, protest, Karave, blocking, highway

The post ರೈತರ ಪ್ರತಿಭಟನೆಗೆ ಬೆಂಬಲ:  ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊಸ ಬಸ್ ಖರೀದಿಗೆ ಟೆಂಡರ್: ಕೊರತೆ ಇರುವ ಕಡೆ ಬಸ್ ಗಳನ್ನು ಒದಗಿಸುತ್ತೇವೆ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,18,2026 (www.justkannada.in): ನಾವು ಬಂದ ಮೇಲೆ ಸುಮಾರು 6 ಸಾವಿರ...

‘ആത്മാര്‍ത്ഥമായി നന്ദി പറയുന്നു’; മെഡിക്കല്‍ സഹായവുമായി ഇന്ത്യയുടെ ആദ്യ കപ്പല്‍ ഇറാനില്‍

ടെഹ്‌റാന്‍: പശ്ചിമേഷ്യന്‍ സംഘര്‍ഷത്തിനിടെ മെഡിക്കല്‍ സഹായവുമായി ഇന്ത്യയുടെ ആദ്യ കപ്പല്‍ ഇറാനിലെത്തി....

'உயிரோடு தான் இருக்கிறேன்' – நிரூபிக்க போராடும் நெதன்யாகு: வீடியோக்களும், சர்ச்சைகளும்! |Full Detail

இஸ்ரேல் பிரதமர் நெதன்யாகு உயிரோடு இருக்கிறாரா... இல்லையா?- இது தற்போது ஈரான்...

100W ఫాస్ట్ చార్జింగ్, 165Hz హై రిఫ్రెష్ రేట్ తో వచ్చేస్తున్న OnePlus 15T..!

OnePlus 15T: కాంపాక్ట్ ఫ్లాగ్‌షిప్‌ స్మార్ట్‌ఫోన్ మార్కెట్లో మరో స్మార్ట్ ఫోన్...