26
August, 2026

A News 365Times Venture

26
Wednesday
August, 2026

A News 365Times Venture

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

Date:

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ ಸ್ವಯಂ ಸೇವಾ ಸರ್ಕಾರೇತರ ಸಂಸ್ಥೆಯಾಗಿದ್ದು, ಸಮಾಜದ ನಿರ್ಗತಿಕ ಮತ್ತು ಹಿಂದುಳಿದ, ದುರ್ಬಲ ವರ್ಗಗಳಿಗೆ ಸಹಾಯ ಮಾಡಲು ಮತ್ತು ಸೇವೆ ಸಲ್ಲಿಸಲು ಶ್ರಮಿಸುತ್ತಿದೆ. ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ ಎಂದು ಇನ್ನರ್ ವೀಲ್  318ರ  ಜಿಲ್ಲಾ ಚೇರ್ಮೇನ್  ಶಬರೀಕಡಿದಾಳು  ಅವರು  ಹೇಳಿದರು.

ನಗರದ ರೋಟರಿ ಭವನದಲ್ಲಿ ನಡೆದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಶಿಕ್ಷಣ, ಆರೋಗ್ಯ , ಸಮುದಾಯದ ಸಮಸ್ಯೆಗಳ ಅರಿತು ನಮ್ಮ ಕ್ಲಬ್ ಗಳು  ಯಾವುದೇ ಸ್ವಾರ್ಥವಿಲ್ಲದೆ ಮಾಡುವ ಸೇವೆಯೇ  ನಮ್ಮ ಗುರಿಯಾಗಿದೆ.  ಈ ನಿಟ್ಟಿನಲ್ಲಿ ಹುಣಸೂರು  ಇನ್ನರ್ ವೀಲ್ ಕ್ಲಬ್ ಉತ್ತಮವಾಗಿ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕ ಶಾಲೆಗೆ ಶುದ್ದ ಕುಡಿಯುವ ನೀರು  ಘಟಕ  ನೀಡಲಾಯಿತು, ಶಾಲಾ ಮಕ್ಕಳಿಗೆ ಕ್ರೀಡಾ ಬಹುಮಾನ ನೀಡಲಾಯಿತು. ಜೊತೆಗೆ ಮೈಸೂರು ಜಿಲ್ಲಾ ಕನ್ನಡರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಧರ್ಮಾಪುರ ನಾರಾಯಣ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ತೇನ್ ಮೋಳಿ ತಂಗಮಾರಯಪ್ಪನ್, ನಿಕಟ ಪೂರ್ವ ಅಧ್ಯಕ್ಷೆ ಸ್ಮೀತಾ ದಯನಂದ್ , ಸದಸ್ಯರಾದ ಡಾ.ರಾಜಶೇಶ್ವರಿ, ಶಿವಕುಮಾರಿ, ಡಾ.ಸಂಗೀತಾ. ರೋಟರಿ ಸಂಸ್ಥೆ ಅಧ್ಯಕ್ಷ ಎಚ್.ಆರ್.ಕೃಷ್ಣಕುಮಾರ್, ಸದಸ್ಯ ಮಹೇಶ್, ಇನ್ನರ್ ವೀಲ್ಸ್ ನಿರ್ದೇಶಕರಾದ ಜಯಲಕ್ಷ್ಮೀ, ಡಾ.ಮಂಜುಳ, ರೋಟರಿ ಶಾಲಾ ಮುಖ್ಯ ಶಿಕ್ಷಕಿ ದೀಪಾ ಎಲ್,  ಸುಜಾತ, ಅಂಜು,ಭಾಗ್ಯ, ಪ್ರಭ, ಸುಮಿತ್ರಾ ಮತ್ತಿತರು ಉಪಸ್ಥಿತರಿದ್ದರು.

Key words: Hunasur, Inner Wheel, service – Sabari Kadidalu

The post ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ...

എന്നെപ്പോലെ സ്വയം വഴി വെട്ടിയവര്‍ ഉണ്ടെങ്കില്‍ വരൂ; വോട്ടിന്റെ കണക്ക് പറഞ്ഞ് അന്‍വര്‍

മലപ്പുറം: കഴിഞ്ഞ നിയമസഭാ തെരഞ്ഞെടുപ്പില്‍ ബേപ്പൂര്‍ മണ്ഡലത്തില്‍ യു.ഡി.എഫിനകത്ത് നിന്ന് തന്നെ...

“உடனடியாக அனைத்து வாக்குறுதிகளையும் ஏன் நிறைவேற்றவில்லை எனக் கேட்க முடியாது" – விசிக திருமாவளவன்

விடுதலை சிறுத்தைகள் கட்சி சார்பில் பரந்தூர் புதிய விமான நிலையத் திட்டம்...

Modi-Rahul Gandhi: కులగణనపై మోడీకి ఖర్గే, రాహుల్‌గాంధీ లేఖ.. ఏముందంటే..!

కులగణన ప్రక్రియపై కాంగ్రెస్ అగ్రనేతలు రాహుల్ గాంధీ, మల్లికార్జున ఖర్గే కేంద్ర...