29
August, 2026

A News 365Times Venture

29
Saturday
August, 2026

A News 365Times Venture

ಹೈಸ್ಪೀಡ್ ರೈಲು ಯೋಜನೆ: ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರಿಗೆ ಎಂ.ಬಿ ಪಾಟೀಲ್ ಪತ್ರ

Date:

ಬೆಂಗಳೂರು,ಫೆಬ್ರವರಿ,5,2026 (www.justkannada.in):  ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ‌ ಮುಂಬಯಿ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಘೋಷಿಸಬೇಕು. ಇದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೆ ಅಪಾರ ಪ್ರಯೋಜನ ಆಗಲಿದೆ ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಹಾಯಕ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.

ಮಂಗಳವಾರವೇ ಈ ಪತ್ರ ಬರೆದಿರುವ ಸಚಿವ ಎಂ.ಬಿ ಪಾಟೀಲ್ ಅವರು, ಈ ಸಲದ ಕೇಂದ್ರ ಬಜೆಟ್‌ನಲ್ಲಿ ಈಗಾಗಲೇ ಘೋಷಿಸಿರುವ ಮುಂಬೈ-ಪುಣೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನೇ ಬೆಂಗಳೂರಿನವರೆಗೂ ವಿಸ್ತರಿಸಬಹುದು ಎಂದಿದ್ದಾರೆ.

ಬಜೆಟ್‌ ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳನ್ನು ಘೋಷಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ ಈ ಎರಡೂ ಮಾರ್ಗಗಳಲ್ಲಿ ರೈಲುಗಳು ಕರ್ನಾಟಕದೊಳಗೆ ಕೇವಲ 100 ಕಿ.ಮೀ. ಮಾತ್ರ ಓಡುತ್ತವೆ. ಇದರಿಂದ ರಾಜ್ಯಕ್ಕೆ ಇರುವ ಪ್ರಯೋಜನ ಸೀಮಿತವಾಗಿರಲಿದೆ ಎಂದು ಎಂ.ಬಿ ಪಾಟೀಲ್  ಹೇಳಿದ್ದಾರೆ.

ಬೆಂಗಳೂರು-ಪುಣೆ ನಡುವೆ ಹೈಸ್ಪೀಡ್ ರೈಲು ಓಡಿಸುವುದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕ ಹಾಗೂ ಪಶ್ಚಿಮ ಮಹಾರಾಷ್ಟ್ರದ ಸಾಂಗಲಿ, ಕೊಲ್ಲಾಪುರ ಮುಂತಾದ ಜಿಲ್ಲೆಗಳಿಗೆ ಅಪಾರ ಲಾಭವಾಗಲಿದೆ. ಇದು ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ತುಮಕೂರು ಮುಂತಾದ ಜಿಲ್ಲೆಗಳಲ್ಲಿ ಆರ್ಥಿಕ ಮತ್ತು ಔದ್ಯಮಿಕ ಚಿತ್ರಣವನ್ನೇ ಬದಲಿಸಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ವಿವರಿಸಿದ್ದಾರೆ.

ಆದ್ದರಿಂದ ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಯೋಜನೆ ಕುರಿತು ವಿಸ್ತೃತ ಕಾರ್ಯಸಾಧ್ಯತಾ ಅಧ್ಯಯನ ನಡೆಸಬೇಕು ಎಂದು ಪಾಟೀಲ ಅವರು ಪತ್ರದಲ್ಲಿ ಕೋರಿದ್ದಾರೆ.

Key words: High-speed rail, project, M.B. Patil, letter

The post ಹೈಸ್ಪೀಡ್ ರೈಲು ಯೋಜನೆ: ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರಿಗೆ ಎಂ.ಬಿ ಪಾಟೀಲ್ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಂಡ್ಯಕ್ಕೆ ಜಪಾನ್‌ ನಿಯೋಗ ಭೇಟಿ: HPV, TT ಲಸಿಕಾ ಅಭಿಯಾನಕ್ಕೆ ಮೆಚ್ಚುಗೆ.

  ಕೆ.ಶೆಟ್ಟಿಹಳ್ಳಿ ಆರೋಗ್ಯ ಕೇಂದ್ರದ ಕಾರ್ಯವೈಖರಿಗೆ ಜಪಾನ್‌ ತಂಡ ಮೆಚ್ಚುಗೆ —...

ഇസ്രഈലി കുടിയേറ്റം: വെസ്റ്റ് ബാങ്ക് നിയമരഹിത പ്രദേശമായി മാറിയെന്ന് കത്തോലിക്കാ പുരോഹിതന്‍

ജെറുസലേം: ഇസ്രഈലി കുടിയേറ്റക്കാരുടെ ആക്രമണങ്ങള്‍ തുടരുന്നതിനാല്‍ വെസ്റ്റ് ബാങ്ക് ഒരു നിയമ...

புதுச்சேரி: `மாநில அந்தஸ்துக்காக ராஜினாமா செய்யத் தயார்!' – பேரவையில் சீறிய முதல்வர் ரங்கசாமி

புதுச்சேரி சட்டப்பேரவையில் பட்ஜெட் மீதான விவாதத்தில் இன்று பேசிய பா.ஜ.க எம்.எல்.ஏ...

Indian Railway: రైళ్లలో టికెట్ లేని ప్రయాణికులకు షాక్.. భారీగా జరిమానాలు..

దక్షిణ మధ్య రైల్వే 2026 ఆగస్టు 24 నుంచి 26 వరకు...