28
August, 2026

A News 365Times Venture

28
Friday
August, 2026

A News 365Times Venture

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Date:

ಬೆಂಗಳೂರು, ಫೆಬ್ರವರಿ ,7,2026 (www.justkannada.in): ಬಿಹಾರಕ್ಕೆ ಪ್ರವಾಸಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಸೋಲದೇವನಹಳ್ಳಿ (Bengaluru rural)ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಾಗಪ್ರಸನ್ನ, ತಾಯಿ ಸುಮಂಗಲಾ(78), ಸಹೋದರಿ ಶಿಲ್ಪಾ(48), ಶ್ರುತಾ (43) ಆತ್ಮಹತ್ಯೆಗೆ ಶರಣಾದವರು.

ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾವ ನಾಗಪ್ರಸಾದ್  ಕೊಲೆ ಮಾಡಿದ್ದರು. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಈ ಮಾತ್ರೆಗಳ ಓವರ್ ಡೋಸ್​ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.

ಬಾಲಕ ಅಮೋಘಕೀರ್ತಿ  ಮೊಬೈಲ್ ​ನಲ್ಲಿ ಫ್ರೀಫೈರ್ ಗೇಮ್​​ ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ.  ಘಟನೆಯ ಬಳಿಕ ಹಣದ ಕೊರತೆಯಿಂದ ಮೆಜೆಸ್ಟಿಕ್‌ನಲ್ಲಿ ಮೂರು ದಿನ ಕಾಲ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಶರಣಾಗಿದ್ದನು. ಪೊಲೀಸರು ಆತನ ಮೇಲೆ ಎಫ್​ಐಆರ್ ದಾಖಲಿಸಿ ಜೈಲಿನಲ್ಲಿಟ್ಟಿದ್ದರು.

ಬಳಿಕ ಆತನ ತಂಗಿ ಶಿಲ್ಪಾ ಬೇಲ್ ಮೂಲಕ ಅಣ್ಣನನ್ನು ಜೈಲಿನಿಂದ ಹೊರ ತಂದಿದ್ದರು. ಬಾಲಕ ಸಾವಿನಿಂದ ನೊಂದಿದ್ದ ಕುಟುಂಬದವರು ಬಿಹಾರದ ಪ್ರವಾಸ ಕೈಗೊಂಡಿದ್ದರು. ಇದೀಗ ಬಿಹಾರದಲ್ಲಿ  ನಾಲ್ವರೂ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

Key words: Four members, family, Karnataka, commit suicide, Bihar

The post ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഫലസ്തീന്‍ ആക്ഷനെ യു.എസ് ഭീകര പട്ടികയില്‍ ഉള്‍പ്പെടുത്തി; നിരോധനം നീക്കാന്‍ ബ്രിട്ടിഷ് പ്രധാനമന്ത്രിക്ക് കത്ത്‌

വാഷിങ്ടണ്‍: ബ്രിട്ടണ്‍ ആസ്ഥാനമായി പ്രവര്‍ത്തിക്കുന്ന ഫലസ്തീന്‍ അവകാശ സംഘടനയായ ഫലസ്തീന്‍ ആക്ഷനെ...

`அரசுக்கு திமுக பஞ்சபாண்டவர்களாக துணை நிற்கும்!' – புதுச்சேரி எதிர்க்கட்சித் தலைவர் நாஜிம்

புதுச்சேரி சட்டப்பேரவையில் கவர்னர் உரைக்கு நன்றி தெரிவிக்கும் தீர்மானத்தின் மீது பேசிய...

PMSBY: రూ.20తో రూ.2 లక్షల బీమా.. ఈ ప్రభుత్వ పథకం గురించి తెలుసా?

PMSBY: సాధారణంగా బీమా పాలసీ తీసుకోవాలంటే ప్రతి ఏడాది భారీ మొత్తంలో...

ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ...