17
February, 2026

A News 365Times Venture

17
Tuesday
February, 2026

A News 365Times Venture

ಡೂಪ್ಲಿನ್ ಕಾಂಪ್ಲೆಕ್ಸ್ ವರ್ತಕರನ್ನು ಖಾಲಿ ಮಾಡಿಸಿ ಆಸ್ತಿ ವಶಕ್ಕೆ ಪಡೆಯಿರಿ: MDA ಪರ ಹೈಕೋರ್ಟ್ ತೀರ್ಪು

Date:

ಮೈಸೂರು,ಫೆಬ್ರವರಿ,17,2026 (www.justkannda.in): ಮೈಸೂರಿನ ಹೃದಯಭಾಗದಲ್ಲಿರುವ “ಡೂಪ್ಲಿನ್ ಕಾಂಪ್ಲೆಕ್ಸ್”  ನ ವರ್ತಕರಿಗೆ ಹೈಕೋರ್ಟ್ ಬಿಸಿ ಮುಟ್ಟಿಸಿದೆ. ಅನಧಿಕೃತವಾಗಿ ಸ್ವಾಧೀನದಲ್ಲಿರುವ ವರ್ತಕರನ್ನ ಖಾಲಿ ಮಾಡಿಸಿ ಆಸ್ತಿಯನ್ನ ತಮ್ಮ ವಶಕ್ಕೆ ಪಡೆಯುವಂತೆ ಹೈಕೋರ್ಟ್ ತೀರ್ಪು ನೀಡಿದೆ.

ಮೈಸೂರಿನ ಡಿ ದೇವರಾಜ ಅರಸ್ ರಸ್ತೆ ಹಾಗೂ ಶಿವರಾಂಪೇಟೆಯ ವಿನೋಬಾ ರಸ್ತೆ ಮತ್ತು ದೇವರಾಜ ಮಾರುಕಟ್ಟೆಯ ಚಿಕ್ಕಗಡಿಯಾರ ಮುಂಭಾಗವಿರುವ “ಡೂಪ್ಲಿನ್ ಕಾಂಪ್ಲೆಕ್ಸ್ ” ಅಂದಿನ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ನಿರ್ಮಿಸಿದೆ.

ಸುಮಾರು 40 ಕ್ಕೂ ಹೆಚ್ಚು ಮಳಿಗೆಗಳಿರುವ ವಾಣಿಜ್ಯ ಸಂಕೀರ್ಣ ಇದಾಗಿದೆ. ಬಹುತೇಕ ಎಲ್ಲಾ ಮಳಿಗೆಗಳಲ್ಲಿ ಸದ್ಯ ವರ್ತಕರು ಸ್ವಾಧೀನದಲ್ಲಿದ್ದಾರೆ. ಬಾಡಿಗೆ ಹಾಗೂ ಮಾಲೀಕತ್ವದ ವಿಚಾರದಲ್ಲಿ ವರ್ತಕರು ಹಾಗೂ ಅಂದಿನ ಮುಡಾ ನಡುವೆ ಕಾನೂನು ಹೋರಾಟ ನಡೆಯುತ್ತಿದೆ. ವರ್ತಕರನ್ನ ಖಾಲಿ ಮಾಡಿಸುವ ಉದ್ದೇಶದಿಂದ ಪ್ರಾಧಿಕಾರ ನ್ಯಾಯಾಲಯದ ಮೊರೆ ಹೋಗಿ ಹಲವು ವರ್ಷಗಳೇ ಉರುಳಿದೆ.

ತಾವೇ ಮಾಲೀಕರೆಂಬಂತೆ ವರ್ತಿಸಿದ ವರ್ತಕರು ಮುಡಾ ನಿರ್ಧಾರಕ್ಕೆ ಸೆಡ್ಡು ಹೊಡೆದು ಕಾನೂನು ಹೋರಾಟ ನಡೆಸುತ್ತಿದ್ದು ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಎರಡೂ ಬದಿಯಿಂದ ವಾದ ಪ್ರತಿವಾದಗಳನ್ನ ಆಲಿಸಿದ ನ್ಯಾಯಾಲಯ ಸದ್ಯ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಪರ ಬ್ಯಾಟ್ ಬೀಸಿದೆ.

ಅನಧಿಕೃತವಾಗಿ ಸ್ವಾಧೀನದಲ್ಲಿರುವ ವರ್ತಕರನ್ನ ಮೂರು ತಿಂಗಳ ಒಳಗಾಗಿ ತೆರುವುಗೊಳಿಸಿ ತಮ್ಮ ಸುಪರ್ಧಿಗೆ ಪಡೆಯುವಂತೆ ತೀರ್ಪು ನೀಡಿದೆ. ಸುಮಾರು 250 ಕೋಟಿ ರೂ. ಮೌಲ್ಯದ ಆಸ್ತಿ ಎಂಡಿಎ ವಶಕ್ಕೆ ಪಡೆಯಬೇಕಿದೆ. ಹಲವಾರು ವರ್ಷಗಳ ಹೋರಾಟಕ್ಕೆ ಸಂದ  ಜಯ ಇದಾಗಿದ್ದು,  ಎಂಡಿಎ  ಆಯುಕ್ತ ರಕ್ಷಿತ್ ರವರು ಈ ಕೂಡಲೇ ಆಸ್ತಿ ವಶಕ್ಕೆ ಅಗತ್ಯ ಕ್ರಮ ಜರುಗಿಸಲಿ. ಎಂಡಿಎ ಪರ ವಾದ ಮಂಡಿಸಿದ ಹೈಕೋರ್ಟ್ ವಕೀಲರು ಪ್ರಾಧಿಕಾರದ ಆಯುಕ್ತರಿಗೆ ಕ್ರಮ ವಹಿಸಿ ಎಂದು  ಪತ್ರ ಬರೆದಿದ್ದಾರೆ.

Key words: Mysore, Dooplin Complex, property, High Court, MDA

The post ಡೂಪ್ಲಿನ್ ಕಾಂಪ್ಲೆಕ್ಸ್ ವರ್ತಕರನ್ನು ಖಾಲಿ ಮಾಡಿಸಿ ಆಸ್ತಿ ವಶಕ್ಕೆ ಪಡೆಯಿರಿ: MDA ಪರ ಹೈಕೋರ್ಟ್ ತೀರ್ಪು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,17,2026 (www.justkannada.in):  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಈ...

നിലമേലിലെ മരണം: അലര്‍ജിയല്ല, ഭക്ഷ്യവിഷബാധയെന്ന് പ്രാഥമിക പോസ്റ്റ്മോര്‍ട്ടം റിപ്പോര്‍ട്ട്

തിരുവനന്തപുരം: കൊല്ലം നിലമേലില്‍ രണ്ട് പേര്‍ മരണപ്പെട്ട സംഭവം ഭക്ഷ്യവിഷബാധ കാരണമെന്ന്...

பட்ஜெட் 2026: “இது விடியா அரசின் கடைசி அத்திப்பழ பட்ஜெட்" – எடப்பாடி பழனிசாமி கடும் விமர்சனம்!

தமிழக சட்டமன்றத்தில் இன்று தாக்கல் செய்யப்பட்ட 2026-27-ம் ஆண்டிற்கான இடைக்கால நிதிநிலை...

AP Speaker Ayyanna Patrudu: స్పీకర్‌ అయ్యన్నపాత్రుడు సంచలన వ్యాఖ్యలు.. ఆ ఎమ్మెల్యేలను రీకాల్‌ చేయాలి..!

AP Speaker Ayyanna Patrudu: ఆంధ్రప్రదేశ్‌ అసెంబ్లీ స్పీకర్‌ చింతకాయల అయ్యన్నపాత్రుడు...