19
February, 2026

A News 365Times Venture

19
Thursday
February, 2026

A News 365Times Venture

ನಂದಿನಿ ಉತ್ಪನ್ನ ಬಗ್ಗೆ ಅಪಪ್ರಚಾರ  ಮಾಡಿದರೇ ಅಗತ್ಯ ಕ್ರಮ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್‌

Date:

ಬೆಂಗಳೂರು,ಫೆಬ್ರವರಿ,18,2026 (www.justkannada.in):  ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್‌ ಬರುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ  ಹಿನ್ನೆಲೆಯಲ್ಲಿ ಈ ಬಗ್ಗೆ  ಮಾಜಿ ಸಂಸದ, ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ ಅವರು ಪ್ರತಿಕ್ರಿಯಿಸಿ ಅಗತ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿ. ನಂದಿನಿ ಉತ್ಪನ್ನಗಳನ್ನು ತಯಾರಿಸುವ ವೇಳೆ ಯಾವುದೇ ರೀತಿಯ ಕಲಬೆರಕೆ ಮಾಡುವುದಿಲ್ಲ. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುತ್ತಾರೆ. ಈ ಬಗ್ಗೆ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ನಾವು ಖಾಸಗಿಯವರ ಜತೆ ಸ್ಪರ್ಧೆ ಮಾಡಬೇಕಾದಾಗ ಅಪಪ್ರಚಾರ ಮಾಡುವುದು ಸಹಜ. ನಂದಿನಿ ಯಾವತ್ತೂ ಗುಣಮಟ್ಟದ ಜತೆ ರಾಜಿಯಾಗಿಲ್ಲ. ನಂದಿನಿಗೆ ಎಷ್ಟೇ ನಷ್ಟವಾದರೂ ಎಂದಿಗೂ ಗ್ರಾಹಕರಿಗೆ ಹಾಗೂ ರೈತರಿಗೆ ಅನ್ಯಾಯ ಮಾಡಿಲ್ಲ, ಗುಣಮಟ್ಟದ ಉತ್ಪನ್ನಗಳನ್ನು ಮುಂದೆಯೂ ನೀಡಲಿದೆ ಎಂದು ಡಿಕೆ ಸುರೇಶ್ ತಿಳಿಸಿದರು.

Key words: action, Nandini product, false information, D.K. Suresh

The post ನಂದಿನಿ ಉತ್ಪನ್ನ ಬಗ್ಗೆ ಅಪಪ್ರಚಾರ  ಮಾಡಿದರೇ ಅಗತ್ಯ ಕ್ರಮ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നുണകള്‍ക്കെതിരെ സത്യം ജയിക്കണം; ഈ വിഷസൃഷ്ടികള്‍ക്ക് എങ്ങനെയാണ് പ്രദര്‍ശനാനുമതി ലഭിക്കുന്നത്? കേരള സ്റ്റോറിക്കെതിരെ മുഖ്യമന്ത്രി

തിരുവനന്തപുരം: കേരളത്തെ ഭീകരവാദ കേന്ദ്രമായി ചിത്രികരിച്ച സംഘപരിവാര്‍ പ്രൊപ്പഗണ്ട ചിത്രം ‘ദി...

"அதிகாரத்தில் பங்கு வேண்டும் என்று கேட்பதில் தவறு கிடையாது!" – சொல்கிறார் தொல்.திருமாவளவன்

விடுதலை சிறுத்தைகள் கட்சியின் தலைவரும், சிதம்பரம் நாடாளுமன்ற உறுப்பினருமான தொல். திருமாவளவன்...

Heritage Foods Legal Notice to Botsa: బొత్స సత్యనారాయణకు హెరిటేజ్‌ లీగల్‌ నోటీసులు..

Heritage Foods Legal Notice to Botsa: వైఎస్‌ఆర్‌ కాంగ్రెస్‌ పార్టీ...

ಅಖಿಲ ಭಾರತೀಯ ಅಂಚೆ ಸಾಂಸ್ಕೃತಿಕ ಸಮ್ಮೇಳನ: 2ನೇ ದಿನದ ಸ್ಪರ್ಧೆಯಲ್ಲಿ ಕರ್ನಾಟಕ ಅಂಚೆ ವೃತ್ತ ಮೊದಲ ಸ್ಥಾನ.

ಮೈಸೂರು,ಫೆಬ್ರವರಿ,18,2026 (www.justkannada.in):  ಸಾಂಸ್ಕೃತಿಕ ಮೈಸೂರಿನಲ್ಲಿ 38ನೇ ಅಖಿಲ ಭಾರತೀಯ ಅಂಚೆ...