20
February, 2026

A News 365Times Venture

20
Friday
February, 2026

A News 365Times Venture

ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್, ಮಾ.2ಕ್ಕೆ ಡೆಡ್ ಲೈನ್: ಮುಖಂಡರ ನಡೆಗೆ ಆಕ್ರೋಶ

Date:

ಬೆಂಗಳೂರು,ಫೆಬ್ರವರಿ,19,2026 (www.justkannada.in): ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮುಷ್ಕರ ನಡೆಸಲಾಗುತ್ತಿತ್ತು. ಈ ಮಧ್ಯೆ ಸರ್ಕಾರದ ವತಿಯಿಂದ ಕೆಎಸ್ ಆರ್ ಟಿಸಿ ಎಂಡಿ ಅಕ್ರಂ ಪಾಷ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಆಲಿಸಿ ಭರವಸೆ ನೀಡಿದ್ದರು.

ಈ ಮಧ್ಯೆ ಜಂಟಿ ಕ್ರಿಯಾ ಸಮಿತಿ ಮುಖಂಡರು  ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದು ಬೇಡಿಕೆಗಳನ್ನ ಈಡೇರಿಸಲು ಸರ್ಕಾರಕ್ಕೆ ಮಾರ್ಚ್ 2ರವರೆಗೆ ಗಡುವು ನೀಡಿದ್ದಾರೆ. ಮಾರ್ಚ್ 2ರೊಳಗೆ ಬೇಡಿಕೆ ಈಡೇರಿಸದಿದ್ದರೇ ಮತ್ತೆ ಮುಷ್ಕರ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

 ಮುಖಂಡ ನಿರ್ಧಾರಕ್ಕೆ ಪ್ರತಿಭಟನಾನಿರತ ಸಾರಿಗೆ ನೌಕರರ ಆಕ್ರೋಶ

ಜಂಟಿ ಕ್ರಿಯಾ ಸಮಿತಿ ಮುಖಂಡರು ತೆಗೆದುಕೊಂಡ ಈ ನಿರ್ಧಾರಕ್ಕೆ ಪ್ರತಿಭಟನಾನಿರತ ಸಾರಿಗೆ ನೌಕರರ ಆಕ್ರೋಶ ವ್ಯಕ್ತಪಡಿಸಿದ್ದು ಮುಷ್ಕರ ನಿಲ್ಲಿಸದಂತೆ ಆಗ್ರಹಿಸಿದ್ದಾರೆ. ವೇದಿಕೆಯ ಮೇಲೆಯೇ ಆಗಮಿಸಿ ಸಾರಿಗೆ ನೌಕರರು ಕಿಡಿಕಾರಿದ್ದಾರೆ.

Key words: Transport workers, strike, deadline, March 2

The post ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್, ಮಾ.2ಕ್ಕೆ ಡೆಡ್ ಲೈನ್: ಮುಖಂಡರ ನಡೆಗೆ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആലപ്പുഴയില്‍ വീട്ടമ്മയുടെ വയറ്റില്‍ കത്രിക കുടുങ്ങിയതായി പരാതി; ആരോപണം വണ്ടാനം മെഡിക്കല്‍ കോളേജിനെതിരെ

ആലപ്പുഴ: പുന്നപ്രയില്‍ വീട്ടമ്മയുടെ വയറ്റില്‍ ശസ്ത്രക്രിയക്കിടെ കത്രിക കുടുങ്ങിയതായി പരാതി. 2021ല്‍...

Jowar Idli Recipe: వెయిట్ లాస్ కోసం హెల్తీ, టేస్టీ బ్రేక్‌ఫాస్ట్.. ఇంట్లోనే ఈజీగా సాఫ్ట్ జొన్న ఇడ్లీలు..

Jowar Idli Recipe: ప్రస్తుతం వయసుకు సంబంధం లేకుండా బరువు పెరుగుతున్నారు....

ಸಫಾರಿ ಆರಂಭಿಸದಂತೆ ಆಗ್ರಹ: ರೈತರಿಂದ ಪ್ರತಿಭಟನೆ

ಚಾಮರಾಜನಗರ,ಫೆಬ್ರವರಿ,19,2026 (www.justkannada.in):  ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಆರಂಭಿಸದಂತೆ ಚಾಮರಾಜನಗರ ಜಿಲ್ಲೆ...