21
February, 2026

A News 365Times Venture

21
Saturday
February, 2026

A News 365Times Venture

ಪೊಲೀಸರಿದ್ದರೂ ಕಲ್ಲು ತೂರಾಟ: ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ?- ಬಿವೈ ವಿಜಯೇಂದ್ರ ಕಿಡಿ

Date:

ಬೆಂಗಳೂರು,ಫೆಬ್ರವರಿ,20,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು, ಚಪ್ಪಲಿ ತೂರಾಟದ ಪುಂಡಾಟಿಕೆ  ನಡೆದಿರುವುದು ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ. ಈ ಓಲೈಕೆ ದುರಾಡಳಿತದ, ತುಘಲಕ್  ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ. ಪೊಲೀಸರ ಉಪಸ್ಥಿತಿಯಲ್ಲಿಯೇ ಕಲ್ಲು ತೂರಾಟ ನಡೆದರೆ, ಇನ್ನು ರಾಜ್ಯದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಈ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಿಂದೂಗಳ ಹಬ್ಬ ಮತ್ತು ಮೆರವಣಿಗೆಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಇಂತಹ ನಿರಂತರ ದಾಳಿಗಳು ವ್ಯವಸ್ಥಿತ ಪಿತೂರಿಯಂತೆ ಕಾಣುತ್ತಿದೆ. ರಾಜ್ಯ ಸರ್ಕಾರ ತಮ್ಮ ಪರ ನಿಲ್ಲಲಿದೆ ಎನ್ನುವ ಧೈರ್ಯವಿಲ್ಲದೆ ಇಂತಹ ಪುಂಡಾಟಿಕೆ ನಡೆಯುವುದು ಸಾಧ್ಯವಿಲ್ಲ. ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಓಲೈಕೆ ರಾಜಕೀಯವನ್ನು ಬಿಟ್ಟು, ರಾಷ್ಟ್ರದ ಅಸ್ಮಿತೆಯಾಗಿರುವ ಶಿವಾಜಿ ಮಹಾರಾಜರ ಗೌರವಕ್ಕೆ ಧಕ್ಕೆ ತಂದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿಗಳೇ, ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷಿಸಬೇಡಿ. ನಮ್ಮ ಆರಾಧ್ಯ ಪುರುಷರ, ನಾಡಿನ ಅಸ್ಮಿತೆಯ ವಿಷಯದಲ್ಲಿ ಸುಮ್ಮನಿರುವ ಪ್ರಶ್ನೆಯೇ ಇಲ್ಲ! ಎಂದು ಬಿವೈ ವಿಜಯೇಂದ್ರ ಎಚ್ಚರಿಸಿದ್ದಾರೆ.

Key words: Stone pelting, despite police, safety, common people, BY Vijayendra

The post ಪೊಲೀಸರಿದ್ದರೂ ಕಲ್ಲು ತೂರಾಟ: ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ?- ಬಿವೈ ವಿಜಯೇಂದ್ರ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അടിതെറ്റി ട്രംപ്; ഇന്ത്യയടക്കമുള്ള രാജ്യങ്ങള്‍ക്ക് തീരുവ വര്‍ധിപ്പിച്ച നടപടി റദ്ദാക്കി സുപ്രീം കോടതി

വാഷിങ്ടണ്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപ് കഴിഞ്ഞ വര്‍ഷം ഇന്ത്യ അടക്കമുള്ള...

திமுக கூட்டணியில் 'ஹவுஸ்புல்' – தொகுதிப் பங்கீட்டில் ஸ்டாலினுக்குக் காத்திருக்கும் சவால் என்ன?

2026 சட்டமன்றத் தேர்தலுக்கு அரசியல் கட்சிகள் தடபுடலாக தயாராகி கொண்டிருக்கின்றன.பேரணி, பிரசாரம்,...

Off The Record : బెజవాడ ఎంపీ సీట్లో ఈసారి గేమ్‌ మార్చబోతున్న వైసీపీ?

విజయవాడ ఎంపీ సీటు విషయంలో వైసీపీ గేమ్‌ మార్చాలనుకుంటోందా? ఇప్పటిదాకా ఒక్కసారి...

ಸ್ನೇಹಮಯಿ ಕೃಷ್ಣ ಬಂಧನ: ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ

ಬೆಂಗಳೂರು,ಫೆಬ್ರವರಿ,20,2026 (www.justkannada.in):  ಮುಡಾ ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ...