ಬೆಂಗಳೂರು, ಫೆಬ್ರವರಿ,23,2026 (www.justkannada.in): ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ನಮ್ಮ ರಾಷ್ಟ್ರೀಯ ನಾಯಕರು. ಇಲ್ಲಿಂದಲೇ ಅವರಿಗೆ ನಮಸ್ಕಾರ ಎಂದು ಲೇವಡಿ ಮಾಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ವಾಪಸ್ ಮರುಸ್ಥಾಪಿಸಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ. ಕೇಂದ್ರ ಸರ್ಕಾರ ಬಡವರು ಮತ್ತು ಕೂಲಿ ಕಾರ್ಮಿಕರ ವಿರುದ್ಧ ದೊಡ್ಡ ದೌರ್ಜನ್ಯ ನಡೆಸುತ್ತಿದೆ ಎಂದು ಕಿಡಿಕಾರಿದರು.
ಹೊಸದಾಗಿ ರೂಪಿಸಿರುವ ವಿಬಿ ಜಿ ರಾಮ್ ಜಿ ಯೋಜನೆಯ ನಿಯಮಗಳ ಬಗ್ಗೆಯೂ ಈವರೆಗೂ ಅಧಿಕೃತವಾಗಿ ಯಾವುದೇ ಆದೇಶ ಹೊರಬಿದ್ದಿಲ್ಲ. ಹಿಂದೆ ಕೆಲಸ ಮಾಡಿದ್ದ ಕೂಲಿಯನ್ನು ಬಿಡುಗಡೆ ಮಾಡಿಲ್ಲ. ನಮಗೆ ಕೂಲಿ ಕಾರ್ಮಿಕರು ಹಾಗೂ ಪಂಚಾಯಿತಿಗಳನ್ನು ಉಳಿಸಿಕೊಳ್ಳಬೇಕಿದೆ. ಅದಕ್ಕಾಗಿ ಮುಂದೆ ಏನು ಮಾಡಬೇಕು ಎಂಬುದನ್ನು ನಾವು ಚರ್ಚೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: HC Mahadevappa, our national leaders, DK Shivakumar
The post ಅವರು ನಮ್ಮ ರಾಷ್ಟ್ರೀಯ ನಾಯಕರು ಅವರಿಗೆ ಒಂದ್ ದೊಡ್ಡ ನಮಸ್ಕಾರ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





