24
February, 2026

A News 365Times Venture

24
Tuesday
February, 2026

A News 365Times Venture

ಫ್ರೂಟ್ಸ್ ರೈತರ ಐಡಿ ಕೇಂದ್ರ ಸರ್ಕಾರದ ಐಡಿಗೆ ಅಪ್ ಡೇಟ್ ಮಾಡಲು ಸೂಚನೆ

Date:

ಬೆಂಗಳೂರು ಗ್ರಾಮಾಂತರ, ಫೆಬ್ರವರಿ, 24,2026 (www.justkannada.in): ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ ಕಿಸಾನ್ ಯೋಜನೆಯು ಸೇರಿದಂತೆ ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಕಡ್ಡಾಯವಾಗಿ ಕೇಂದ್ರ ನೋಂದಾಯಿತ ರೈತ ಸಂಖ್ಯೆ ಮಾಡಿಕೊಳ್ಳುವುದು ಅಗತ್ಯವಿರುತ್ತದೆ.  ಆದರಿಂದ ಜಮೀನು ಹೊಂದಿರುವ ಎಲ್ಲಾ ರೈತರು ಫ್ರೂಟ್ಸ್ ಐಡಿಯನ್ನು ಕೇಂದ್ರ ಸರ್ಕಾರದ ಐಡಿಗೆ(Central ID)ಅಪ್ಡೇಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಸೂಚಿಸಿದ್ದಾರೆ.

ತೋಟಗಾರಿಕೆ/ ಕೃಷಿ/ ಗ್ರಾಮಒನ್/ ಕಂದಾಯ/ ಪಶುಸಂಗೋಪನೆ ಇಲಾಖೆಗಳಲ್ಲಿ ಅಪ್ಡೇಟ್ ಮಾಡಿಸಿಕೊಳ್ಳಬಹುದು. ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಜಮೀನು ವಿವರಗಳೊಂದಿಗೆ ಇಲಾಖೆಗಳನ್ನು ಸಂಪರ್ಕಿಸಬಹುದು.

ಪಿ.ಎಂ ಕಿಸಾನ್ ಬೆಳೆ ವಿಮೆ, MSP ಹಣ, ಹಾಗೂ ಇತರೆ ಎಲ್ಲಾ ಯೋಜನೆಗಳ ಸೌಲಭ್ಯ ಪಡೆಯಲು ಈ ಐಡಿ ಕಡ್ಡಾಯವಾಗಿರುತ್ತದೆ.  ಈ ಐಡಿ ಮಾಡಿಸಿಕೊಳ್ಳಲು ಫೆಬ್ರವರಿ 27 ಕೊನೆಯ ದಿನಾಂಕವಾಗಿರುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲಾ ರೈತರು ತಕ್ಷಣವೇ ನೋಂದಣಿ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಬಾಬು ಬಿ.ಎಂ ದೂರವಾಣಿ ಸಂ. 9480461234, ದೊಡ್ಡಬಳ್ಳಾಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಶಶಿಕಲಾಟಿ.ಆರ್ ದೂರವಾಣಿ ಸಂ. 9482129648,

ಹೊಸಕೋಟೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ದೀಪಾ ಎಂ.ಎಸ್ ದೂರವಾಣಿ ಸಂ. 9880210892, ನೆಲಮಂಗಲ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹರೀಶ್ ಆರ್. ದೂರವಾಣಿ ಸಂ.  9880461607 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Update, fruit farmers,  IDs ,central government ID

The post ಫ್ರೂಟ್ಸ್ ರೈತರ ಐಡಿ ಕೇಂದ್ರ ಸರ್ಕಾರದ ಐಡಿಗೆ ಅಪ್ ಡೇಟ್ ಮಾಡಲು ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കലാപശ്രമം; എ.ഐ ഉച്ചകോടിയിലെ പ്രതിഷേധത്തില്‍ അറസ്റ്റിലായവര്‍ക്കെതിരെ ഗുരുതര വകുപ്പുകള്‍ ചുമത്തി പൊലീസ്

ന്യൂദല്‍ഹി: എ.ഐ ഉച്ചകോടിയിലെ പ്രതിഷേധത്തെ തുടര്‍ന്ന് അറസ്റ്റിലായ യൂത്ത് കോണ്‍ഗ്രസ് നേതാക്കള്‍ക്കെതിരെ...

ஆண்தாய் ஆனந்த் `டு' பிஸி ஆனந்த் – தவெக செயல் வீரர்கள் கூட்டத்தின் கலகல மொமென்ட்ஸ்! | TVK

தவெக-வின் செயல்வீரர்கள் கூட்டம் வில்லிவாக்கத்தில் நடந்திருந்தது. கட்சியின் பொதுச்செயலாளர் ஆனந்த், ஆதவ்,...

ప్రత్యర్థులకు గుండె గుబేల్.. 110 బిలియన్ డాలర్ల పెట్టుబడితో Reliance Industries భారీ స్కెచ్!

Reliance Industries: భారత వాణిజ్య రంగంలో అతిపెద్ద సంస్థల్లో ఒకటైన రిలయన్స్...

ಹೊಸ ಶಾಸಕರ ಸಚಿವ ಸ್ಥಾನದ ಬೇಡಿಕೆ ತಪ್ಪೇನಿಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಫೆಬ್ರವರಿ,24,2026 (www.justkannada.in): ಹೈಕಮಾಂಡ್ ನಾಯಕರಿಗೆ ಹೊಸ ಯುವ ಶಾಸಕರು ಪತ್ರ...