1
March, 2026

A News 365Times Venture

1
Sunday
March, 2026

A News 365Times Venture

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿದ ಜಮ್ಮು ಕಾಶ್ಮೀರ

Date:

ಹುಬ್ಬಳ್ಳಿ,ಫೆಬ್ರವರಿ,28,2026 (www.justkannada.in):  ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕವನ್ನು ಸೋಲಿಸುವ ಮೂಲಕ ಜಮ್ಮುಕಾಶ್ಮೀರ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದಿದೆ.

ರಣಜಿ ಟ್ರೋಫಿ ಫೈನಲ್ ನಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌  ಆಯ್ಕೆ ಮಾಡಿಕೊಂಡ ಜಮ್ಮು ಮತ್ತು ಕಾಶ್ಮೀರ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ನಂತರ ಮೊದಲ ಇನ್ನಿಂಗ್ಸ್ ಆಡಲು ಕಣಕ್ಕಿಳಿದ ಕರ್ನಾಟಕ ಕೇವಲ 293 ರನ್‌ ಗಳಿಗೆ ಆಲ್ ಔಟ್ ಆಯಿತು.

ಇತ್ತ ಮೊದಲ ಇನ್ನಿಂಗ್ಸ್​ನಂತೆ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಜಮ್ಮುಕಾಶ್ಮೀರದ ಬ್ಯಾಟ್ಸ್‌ ಮನ್ ​ಗಳು ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಆರಂಭಿಕ ಕಮ್ರಾನ್ ಇಕ್ಬಾಲ್ 160 ರನ್‌  ಬಾರಿಸಿದರೇ ಸಾಹಿಲ್ ಕೂಡ ಶತಕ ಗಳಿಸಿ  ಜಮ್ಮುಕಾಶ್ಮೀರ ತಂಡ ಒಟ್ಟು ಮುನ್ನಡೆ 630 ರನ್‌ ಗಳನ್ನು ಮೀರಿದ್ದರಿಂದ ಪಂದ್ಯವನ್ನು ಡ್ರಾದಲ್ಲಿ ಅಂತ್ಯಗೊಳಿಸಲಾಯಿತು.

ನಿಯಮಗಳ ಪ್ರಕಾರ, ರಣಜಿ ಟ್ರೋಫಿಯಲ್ಲಿ ಪಂದ್ಯ ರದ್ದಾದರೆ, ಮೊದಲ ಇನ್ನಿಂಗ್ಸ್ ಆಧರಿಸಿ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಅಂದರೆ ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಪಡೆಯುವ ತಂಡವನ್ನು ವಿಜೇತರೆಂದು ಘೋಷಿಸಲಾಗುತ್ತದೆ. ಈ ನಿಯಮದನ್ವಯ ಮೊದಲ ಇನ್ನಿಂಗ್ಸ್​ನಲ್ಲಿ 291 ರನ್​ಗಳ ಮುನ್ನಡೆ ಪಡೆದುಕೊಂಡಿದ್ದ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಚಾಂಪಿಯನ್ ಪಟ್ಟ ಒಲಿಯಿತು.

ಪಂದ್ಯ ಗೆಲ್ಲುತ್ತಿದ್ದಂತೆ ಮೈದಾನದಲ್ಲಿ ಜಮ್ಮುಕಾಶ್ಮೀರದ ಆಟಗಾರರು ಕುಣಿದು ಕುಪ್ಪಳಿಸಿದರು. ಜಮ್ಮುಕಾಶ್ಮೀರ ಸಿಎಂ ಸಿಎಂ ಓಮರ್ ಅಬ್ದುಲ್ಲಾ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು.

Key words: Jammu and Kashmir, Ranji Trophy, first time,defeating, Karnataka

The post ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿದ ಜಮ್ಮು ಕಾಶ್ಮೀರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೋರ್ಟ್ ತಡೆ ಹಿನ್ನೆಲೆ, ಸದ್ಯಕ್ಕೆ ಒಳ ಮೀಸಲಾತಿ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಫೆಬ್ರವರಿ,28,2026 (www.justkannada.in): ಒಳ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಿಂದ ದಲಿತರಿಗೆ...

ഇറാൻ പ്രൈമറി സ്കൂളിലെ ഇസ്രഈല്‍ ആക്രമണം; മരണം 85 ആയി, മരണസംഖ്യ ഉയരാൻ സാധ്യത

ടെഹ്‌റാൻ: ഇറാനിലെ പ്രൈമറി സ്കൂളിന് നേരെ ഇസ്രഈൽ നടത്തിയ ആക്രമണത്തിൽ മരണസംഖ്യ...

'இதற்கு பதில் கிடைக்காமல் போகாது' – ஈரான் பெண்கள் பள்ளியில் ஏவுகணை தாக்குதல்; 85 பேர்‌ உயிரிழப்பு

இன்று காலை முதல் ஈரான் மீது இஸ்ரேல், அமெரிக்கா தாக்குதல் நடத்தி...

Israel-Iran War: “హర్మూజ్ జలసంధి”ని మూసేసిన ఇరాన్.. ప్రపంచవ్యాప్తంగా చమురు సంక్షోభం..

Israel-Iran War: ఇజ్రాయిల్-ఇరాన్ యుద్ధం మిడిల్ ఈస్ట్‌లో సంక్షోభాన్ని స‌ృష్టించింది. సుప్రీంలీడర్...