10
March, 2026

A News 365Times Venture

10
Tuesday
March, 2026

A News 365Times Venture

ಎರಡು ತಿಂಗಳಲ್ಲಿ ಹಲವು ಪ್ರಕರಣ ಭೇದಿಸಿದ ಮೈಸೂರು ಪೊಲೀಸರು: ನಗದು ಚಿನ್ನಾಭರಣ ವಶಕ್ಕೆ

Date:

ಮೈಸೂರು,ಮಾರ್ಚ್,9,2026 (www.justkannada.in):  ಮೈಸೂರು ಜಿಲ್ಲಾ ಪೊಲೀಸರು ಎರಡು ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ ಹಲವು ಪ್ರಕರಣಗಳನ್ನ ಪತ್ತೆ ಮಾಡಿದ್ದು ನಗದು, ಚಿನ್ನಾಭರಣ, ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, 2026 ನೇ ಸಾಲಿನ ಜನವರಿ ಮಹೆಯಿಂದ ಫೆಬ್ರವರಿ ಮಾಹೆಯ ವರೆಗೆ 01 ಡಕಾಯಿತಿ, 02 ಸುಲಿಗೆ, 07 ಮನೆ ಕಳ್ಳತನ, 05 ವಾಹನ ಕಳ್ಳತನ. 08 ಸಾಮಾನ್ಯ ಕಳ್ಳತನ, 01 ಜಾನುವಾರು ಪ್ರಕರಣಗಳನ್ನು ಪತ್ತೆ ಮಾಡಿ, ಒಟ್ಟು ರೂ. 29.97.788/- ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಒಟ್ಟು 09 ಪ್ರಕರಣಗಳಲ್ಲಿ 279 ಗ್ರಾಂ ಚಿನ್ನದ ಒಡವೆಗಳು ಮತ್ತು 01 ಪ್ರಕರಣದಲ್ಲಿ 30 ಗ್ರಾಂ ಬೆಳ್ಳಿಯ ಕಾಲು ಚೈನು ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ 10,46,800 ರೂ.ಗಳಾಗಿದೆ ಎಂದು ತಿಳಿಸಿದರು.

ಹಾಗೆಯೇ ಒಟ್ಟು 05 ಪ್ರಕರಣಗಳಲ್ಲಿ 3,76,989 ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 06 ಪ್ರಕರಣಗಳಲ್ಲಿ ಮೂರು ಕಾರು, ಒಂದು ವ್ಯಾನ್ , 4 ಮೋಟಾರ್ ಬೈಕ್  ಸೇರಿ 08 ವಾಹನಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ 14,33,000/- ರೂಗಳಾಗಿದೆ.

ಒಟ್ಟು 03 ಪ್ರಕರಣಗಳಲ್ಲಿ ಮೋಟಾರ್, ಮೊಬೈಲ್ ಹಾಗೂ ವೈರ್ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ 82,999 ರೂ. ಗಳಾಗಿದೆ.  01 ಪ್ರಕರಣಗಳಲ್ಲಿ 02 ಹಸುಗಳು ಗಳನ್ನು ವಶಪಡಿಸಿಕೊಂಡಿದ್ದು, ಇವರುಗಳ ಒಟ್ಟು ಅಂದಾಜು ಮೌಲ್ಯ 58,000 ರೂ. ಗಳಾಗಿದೆ ಎಂದು ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

2026 ನೇ ಸಾಲಿನ ಜನವರಿ ಮಾಹೆಯಿಂದ ಮಾರ್ಚ್ ಮಾಹೆವರೆಗೆ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ 55 ಪ್ರಕರಣಗಳನ್ನು ದಾಖಲಿಸಿದ್ದು, 1 ಕೆ.ಜಿ. 860 ಗ್ರಾಂ ಗಾಂಜಾ ಮತ್ತು ಎಂ.ಡಿ.ಎಂ.ಎ .010 ಎಂ.ಎಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 56 ಜನರುಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

2026 ನೇ ಸಾಲಿನ ಜನವರಿ ಮಾಹೆಯಿಂದ ಮಾರ್ಚ್ ಮಾಹೆವರೆಗೆ ಲಾಟರಿ ಕಾಯ್ದೆ ಅಡಿ ಒಟ್ಟು 14 ಪ್ರಕರಣಗಳನ್ನು ದಾಖಲಿಸಿದ್ದು, 2,26,707 ರೂ. ಮೊತ್ತದ ಲಾಟರಿ ಟಿಕೇಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

Key words: Mysore Police, cases, two months, Cash, jewellery, seized

The post ಎರಡು ತಿಂಗಳಲ್ಲಿ ಹಲವು ಪ್ರಕರಣ ಭೇದಿಸಿದ ಮೈಸೂರು ಪೊಲೀಸರು: ನಗದು ಚಿನ್ನಾಭರಣ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ദല്‍ഹി കലാപക്കേസ്; ഷര്‍ജീല്‍ ഇമാമിന് ഇടക്കാല ജാമ്യം

ന്യൂദല്‍ഹി: ദല്‍ഹി കലാപ ഗൂഢാലോചനക്കേസില്‍ ഷര്‍ജീല്‍ ഇമാമിന് ഇടക്കാല ജാമ്യം. സഹോദരന്റെ...

போர்களில் கொல்லப்படும் குழந்தைகள்… உறங்குகிறதா உலகின் மனசாட்சி?

உலகில் நடக்கும் ஒவ்வொரு போரும் குழந்தைகளுக்கு எதிரான போர்தான். தற்போது அமெரிக்காவும்...

ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು:  FIR ದಾಖಲು.

ಮೈಸೂರು,ಮಾರ್ಚ್,9,2026 (www.justkannada.in): ಇಬ್ಬರು ಮಹಿಳೆಯರು  ವೃದ್ದೆಯ ಗಮನ ಬೇರೆಡೆ ಸೆಳೆದು...