15
March, 2026

A News 365Times Venture

15
Sunday
March, 2026

A News 365Times Venture

ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ

Date:

ಬೆಂಗಳೂರು, ಮಾರ್ಚ್, 14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬೆಂಗಳೂರಿನ ಹೋಟೆಲ್ ಮಾಲಕಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ.

ಸಿಲಿಂಡರ್ ಪೂರೈಕೆಯಲ್ಲಿ ಶೇ50ಕ್ಕೂ ಹೆಚ್ಚು ಕಡಿತವಾಗಿರುವುದರಿಂದ ಹೋಟೆಲ್‌ ಗಳನ್ನು ನಡೆಸುವುದು ಕಷ್ಟವಾಗುತ್ತಿದೆ. ಇದರ ಜೊತೆಗೆ ಸಿಲಿಂಡರ್ ಬೆಲೆ ಏರಿಕೆಯ ಪರಿಣಾಮ ಮಹಿಳಾ ಉದ್ಯಮಿಗಳ ಅಲ್ಪ ಲಾಭಾಂಶ ಸಂಪೂರ್ಣವಾಗಿ ಕಡಿಮೆಯಾಗಿದೆ. ಹೀಗಾಗಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೆ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ತಕ್ಷಣ ಸುಗಮಗೊಳಿಸಬೇಕು. ಮಹಿಳಾ ಉದ್ಯಮಿಗಳು ನಡೆಸುವ ಹೋಟೆಲ್‌ಗಳಿಗೆ ಗ್ಯಾಸ್ ಹಂಚಿಕೆಯಲ್ಲಿ ವಿಶೇಷ ಆದ್ಯತೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Key words: LPG, cylinder supply, Hotel owner, Letter, PM Modi

The post ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നൂറിലധികം സീറ്റുമായി യു.ഡി.എഫ് തിരിച്ചുവരും; കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രം: വി.ഡി. സതീശന്‍

പറവൂര്‍: കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രമേയുള്ളുവെന്ന് പ്രതിപക്ഷ...

Assembly Elections: தமிழ்நாடு உள்ளிட்ட 5 மாநில தேர்தல் தேதியை அறிவித்த தேர்தல் ஆணையம்!- முழு விவரம்

தேர்தல் நெருங்குவதால் அரசியல் களம் சூடு பிடித்திருக்கிறது. அரசியல் கட்சிகளும் கூட்டணிகளை...

Minister Seethakka: హమాలీలకు హెల్త్ కార్డ్, ఇన్సూరెన్స్.. మంత్రి సీతక్క కీలక నిర్ణయం..

తెలంగాణ సమాజ నిర్మాణంలో తమ రక్తాన్ని చెమటగా మార్చి కష్టపడే హమాలీ...

ಮಾ.23ರಿಂದ ವೈರಮುಡಿ ಬ್ರಹ್ಮೋತ್ಸವ: ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ- ಸಚಿವ ಚಲುವರಾಯಸ್ವಾಮಿ

ಮಂಡ್ಯ,ಮಾರ್ಚ್,14,2026 (www.justkannada.in): 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ...