ಬೆಂಗಳೂರು,ಮಾರ್ಚ್,18,2026 (www.justkannada.in): ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತಿ ಜಾರಿಯಲ್ಲಿರುತ್ತದೆ ಹೀಗಾಗಿ ಚುನಾವಣಾ ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾರ್ಚ್ 27 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಬಗ್ಗೆ ಚರ್ಚೆ ಮಾಡುತ್ತೇವೆ. ಒಳಮೀಸಲಾತಿ ಜಾರಿ ಮಾಡಬೇಕಾ ಬೇಡವಾ ಅನ್ನೋದರ ಬಗ್ಗೆ ಬಳಿಕ ತೀರ್ಮಾನ ಮಾಡುತ್ತೇವೆ. ಚುನಾವಣಾ ಆಯೋಗದ ಗಮನಕ್ಕೆ ತಂದು ತೀರ್ಮಾನ ಮಾಢುತ್ತೇವೆ ಎಂದರು. ಪ
ದುರ್ಬಲ ಸಮುದಾಯಕ್ಕೆ ಅನ್ಯಾಯವಾದರೆ ರಾಜೀನಾಮೆ ಎಂಬ ಶಾಸಕ ಕೃಷ್ಣಮೂರ್ತಿ ಹೇಳಿಕೆಗೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ ಪರಮೇಶ್ವರ್, ಸಮುದಾಯದ ಪ್ರತಿನಿಧಿಯಾಗಿ ಏನು ಮಾಡಬೇಕೋ ಮಾಡುತ್ತಾರೆ ಎಂದರು.
Key words: Code of Conduct, Election Commission, internal reservation, Minister, Parameshwar
The post ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





