25
March, 2026

A News 365Times Venture

25
Wednesday
March, 2026

A News 365Times Venture

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಿ –MLC ಕೆ.ಶಿವಕುಮಾರ್ ಆಗ್ರಹ

Date:

ಬೆಂಗಳೂರು,ಮಾರ್ಚ್,24,2026 (www.justkannada.in):  ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ವಿಧಾನ ಪರಿಷರಿತ್ ಸದಸ್ಯ ಕೆ.ಶಿವಕುಮಾರ್ ಅವರು ಒತ್ತಾಯಿಸಿದರು.

ವಿಧಾನ ಪರಿಷತ್ ಅಧಿವೇಶನದಲ್ಲಿ ಚುಕ್ಕೆ ಗುರತಿನ ಪ್ರಶ್ನೆಗೆ ಉತ್ತರ ಪಡೆದು ಮಾತನಾಡಿದ ಕೆ.ಶಿವಕುಮಾರ್ ಅವರು, ಮೈಸೂರು ನಗರದಲ್ಲಿ 200ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿದ್ದವು. ಪ್ರಸ್ತುತ ನೂರಕ್ಕೆ ಇಳಿಕೆ ಕಂಡಿವೆ. ಎಲ್ಲಾ ಕಟ್ಟಡಗಳನ್ನು ಕೆಡುವಲಾಗಿದೆ.  ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಹೇಳಿದರು.

ಮಹಾರಾಜರ ಕಾಲದಲ್ಲಿ ದಸರಾ ವೇಳೆ ಎಲ್ಲಾ ಕಟ್ಟಡಗಳಿಗೂ ಸುಣ್ಣ-ಬಣ್ಣ ಬಳಿದು ನಿರ್ವಹಣೆ ಮಾಡುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಅನುದಾನದ ಕೊರತೆಯಿಂದ ನಿರ್ವಹಣೆ ಕುಂಠಿತವಾಗಿದೆ. ಎಲ್ಲಾ ಪ್ರವಾಸಿಗರು ವಿದೇಶಕ್ಕೆ ತೆರಳುವುದು ಅಲ್ಲಿನ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಮುಖ್ಯ ಉದ್ದೇಶವಾಗಿರುತ್ತದೆ ಎಂದು ತಿಳಿಸಿದರು.

ನಮ್ಮ ಪಾರಂಪರಿಕ ಕಟ್ಟಡಗಳನ್ನು ರಕ್ಷಣೆ ಮಾಡದಿದ್ದರೆ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಧ್ಯವಾಗುವುದಿಲ್ಲ. ಜಿಲ್ಲಾಡಳಿತದ ಬಳಿ ಇರುವ ಅನುದಾನ ಸಾಲದು. ಆಸ್ತಿ ತೆರಿಗೆಯಲ್ಲಾದರು ಅನುದಾನ ಒದಗಿಸಲು ಮಂತ್ರಿಗಳ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.

ಪಾರಂಪರಿಕ ಕಟ್ಟಡಗಳ 100 ಮೀ. ವ್ಯಾಪ್ತಿಯಲ್ಲಿ ಬ್ರಿಗೇಡ್ ಸಂಸ್ಥೆಯವರು 14 ಹಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಇದಕ್ಕೆ ಅನುಮತಿ ನೀಡಿದವರ ವಿರುದ್ಧ ತನಿಖೆ ಮಾಡಿಸಿ, ನಿಯಮ ಉಲ್ಲಂಘಿಸದಂತೆ ಕ್ರಮವಹಿಸಬೇಕು ಎಂದು ಕೆ.ಶಿವಕುಮಾರ್ ಒತ್ತಾಯಿಸಿದರು.

ಈ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಮಾತನಾಡಿ, ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಪಾರಂಪರಿಕ ಕಟ್ಟಡ ಸಂರಕ್ಷಣಾ ಸಮಿತಿಯನ್ನು ರಚಿಸಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ಗುರುತಿಸಿ ರಕ್ಷಣೆ ಮಾಡಲಾಗುತ್ತಿದೆ ಎಂದರು.

ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಯಲ್ಲಿ ಅನುದಾನ ಲಭ್ಯವಿದೆ. ಪಾರಂಪರಿಕ ಕಟ್ಟಡದ 100 ಮೀ. ಬಳಿ ಕಾಮಗಾರಿ ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಲ್ಯಾನ್ಸ್ ಡೌನ್ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು, ಪ್ರಸ್ತುತ ನ್ಯಾಯಾಲಯದಲ್ಲಿ ಪ್ರಕರಣವಿದ್ದು, ಬಗೆಹರಿದ ಕೂಡಲೇ ನೂತನ ಕಟ್ಟಡ ನಿರ್ಮಾಣ ಮಾಡಲಾಗವುದು ಎಂದು ತಿಳಿಸಿದರು.

Key words: more funds, conservation, heritage buildings, MLC, K. Shivakumar

The post ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಿ –MLC ಕೆ.ಶಿವಕುಮಾರ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തോല്‍പിച്ചത് കോണ്‍ഗ്രസ്, വോട്ട് ചെയ്യരുതെന്ന് വീടുകള്‍ കയറി പ്രചരണം നടത്തി; തുറന്നുപറഞ്ഞ് മുന്‍മന്ത്രി ജയലക്ഷ്മി

കല്‍പ്പറ്റ: 2021 നിയമസഭാ തെരഞ്ഞെടുപ്പില്‍ തന്നെ തോല്‍പ്പിക്കാന്‍ കോണ്‍ഗ്രസ് ഗൂഡാലോചന നടത്തിയതായി...

'ராகுலுக்கு விஜய்தான் பிடிக்கும்; காங் நிர்வாகிகள் தவெக ஆபிஸில் நிற்கிறார்கள்!' – ஆதவ் அர்ஜூனா

தவெகவின் சென்னை எழும்பூர் தொகுதி வேட்பாளராக கட்சியின் கொள்கைப் பரப்புச் செயலாளர்...

Most Polluted Country: ప్రపంచంలో అత్యంత కాలుష్య దేశంగా పాకిస్తాన్.. భారత్ ఎన్నో స్థానమంటే..

Most Polluted Country: ప్రపంచంలో అత్యంత కాలుష్యదేశంగా పాకిస్తాన్ నిలిచింది. స్విట్జర్లాండ్‌కు...

IPL 2026 : ‘RCB’ ತಂಡಕ್ಕೆ  KMF ಅಧಿಕೃತ ಪಾಲುದಾರ..!

ಬೆಂಗಳೂರು,ಮಾರ್ಚ್,24,2026 (www.justkannada.in): ಐಪಿಎಲ್ 2026 ಆವೃತ್ತಿಯಲ್ಲಿ ಆರ್‌ ಸಿಬಿ ತಂಡಕ್ಕೆ...