ದಾವಣಗೆರೆ,ಮಾರ್ಚ್,28,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು ಕಾಂಗ್ರೆಸ್ ಪ್ರಚಾರದ ವೇಳೆ ಹೈಡ್ರಾಮಾ ನಡೆದಿದೆ.
ಬಿಜೆಪಿ ನಾಯಕರಿಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ದಾವಣಗೆರೆಗೆ ಪ್ರಚಾರಕ್ಕೆ ಬರುವಂತೆ ಬಿಜೆಪಿ ಹಾಕಿದ್ದ ಸವಾಲು ಸ್ವೀಕರಿಸಿ ಬಂದಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ, ಪೊರಕೆ ಪ್ರದರ್ಶನವಾಗಿದೆ.
ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರಾದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆಗೆ ಬರುವಂತೆ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ಕಾರ್ಯಕರ್ತರು ಸವಾಲು ಹಾಕಿದ್ದರು.
ಹೀಗಾಗಿ ಬಿಜೆಪಿ ಕಚೇರಿಯಿಂದಲೇ ಪ್ರದೀಪ್ ಈಶ್ವರ್ ಪ್ರಚಾರ ಆರಂಭಿಸಿದ್ದು ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೊರಕೆ ಪ್ರದರ್ಶಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಪ್ರದೀಪ್ ಈಶ್ವರ್ ಕಾರಿನ ಮೇಲೆ ನಿಂತು ಭಾವುಟ ಹಾರಿಸಿ ಭುಜ ತಟ್ಟಿದ್ದಾರೆ. ಈ ವೇಳೆ ಹುಚ್ಚ ಹುಚ್ಚ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ .
Key words: Davanagere by-election, Campaign, Congress, Pradeep Eshwar, BJP
The post ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





