30
March, 2026

A News 365Times Venture

30
Monday
March, 2026

A News 365Times Venture

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೆ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ ಒದಗಿಸಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಯು ವಿಜಯೇಂದ್ರ ಅವರ ಅಧ್ಯಕ್ಷತೆಯ ಹೋಗುತ್ತಿದೆ. ಈ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಸೋತರೆ ವಿಜಯೇಂದ್ರ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ.  ಹೀಗಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ  ಮರಳಿ ಬಿಜೆಪಿ ಸೇರಲು ಇದೊಂದು ಒಳ್ಳೆಯ ಅವಕಾಶ. ಬಿಜೆಪಿಯನ್ನು ಸೋಲಿಸಿ ವಿಜಯೇಂದ್ರ ಅವರನ್ನು ಕೆಳಗಿಳಿಸುವ ತಮ್ಮ ಕನಸು ನನಸು ಮಾಡಿಕೊಳ್ಳಬೇಕು ಎಂದು ಯತ್ನಾಳ್ ಗೆ ಸಲಹೆ ನೀಡಿದರು.

ಒಂದು ವೇಳೆ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ವಿಜಯೇಂದ್ರ ಅವರ ಬಲ ಹೆಚ್ಚಲಿದೆ. ಬಿಜೆಪಿ ಸೋತರೆ ವಿಜಯೇಂದ್ರ ಬಲ ಕುಸಿಯಲಿದೆ. ಯತ್ನಾಳ್ ಅವರನ್ನ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ. ಅವರಿಗೆ ಸ್ವಾಭಿಮಾನ, ಇದ್ದರೆ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ತೋರಿಸಲಿ.  ನಾವಂತೂ ಎರಡೂ ಕ್ಷೇತ್ರದಲ್ಲಿ ಗೆಲ್ಲುವುದು ನಿಶ್ಚಿತ ಎಂದು ಸಚಿವ ಎಂ.ಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

Key words: By-election, Yatnal, rejoin, BJP, Minister, M.B. Patil

The post ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മനുഷ്യരുടെ എല്ലാ വോട്ടും വേണം, മതവര്‍ഗീയതയോട് യോജിപ്പില്ല; എസ്.ഡി.പി.ഐ വോട്ട് സ്വീകരിക്കുമോ എന്ന ചോദ്യത്തില്‍ ബിനോയ് വിശ്വം

കൊച്ചി: എല്ലാ മനുഷ്യരുടെയും വോട്ടുകള്‍ സ്വീകരിക്കുമെന്നും എന്നാല്‍ മതവര്‍ഗീയ സംവിധാനങ്ങളോട് ആശയപരമായി...

தேர்தல்: 'தனித்தொகுதி' Vs 'பொதுத்தொகுதி' – என்ன கணக்கு… எப்படி உருவானது?!

தமிழகத்தில் சட்டமன்றத் தேர்தல் திருவிழா களைகட்டத் தொடங்கிவிட்டது. அரசியல் கட்சிகளுக்கு இடையிலான...

Weight Loss Drugs: రూ.450తోనే బరువు తగ్గొచ్చు..! వైద్యుల వార్నింగ్..

Weight Loss Drugs: భారతదేశంలో బరువు తగ్గించే సెమాగ్లుటైడ్ మందు ఇప్పుడు...

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ...