ಬೆಂಗಳೂರು,ಏಪ್ರಿಲ್,10,2026 (www.justkannada.in): ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯದ ಹಲವೆಡೆ ಗ್ಯಾಸ್ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನಮ್ಮ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು. ಕದನ ವಿರಾಮ ಆಗುತ್ತಿದೆ. ನಮ್ಮ ಹಡಗುಗಳೂ ಬರಬಹುದು ಎಂದರು.
ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ವಿಡಿಯೋ ವೈರಲ್ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಕಮಿಷನರ್ ರಿಂದ ಪ್ರಕರಣ ಬಗ್ಗೆ ಮಾಹಿತಿ ಪಡೆದಿದ್ದೇನೆ. ಜೊಂಬಿ ಡ್ರಗ್ಸ್ ಏನು ಇಲ್ಲ. ಅದು ಸತ್ಯಕ್ಕೆ ದೂರವಾದದ್ದು. ಪಂಜಾಬ್ ಮೂಲದ ಲಾರಿ ಚಾಲಕನಿಗೆ ಕುಡಿತದ ಅಭ್ಯಾಸವಿತ್ತು ಹಿಂದೆ ಪಂಜಾಬ್ ನಲ್ಲಿ ಡ್ರಗ್ಸ್ ತೆಗೆದುಕೊಂಡಿದ್ದನು ಎಂದು ಹೇಳಿದ್ದ. ಯಾವುದೋ ಆರೋಗ್ಯ ಸಮಸ್ಯೆಗಳಿಗೂ ಔಷಧಿ ತೆಗೆದುಕೊಂಡಿದ್ದ. ಈಗ ಆತನ ಬಂಧನವಾಗಿದೆ ಎಂದರು.
Key words: LPG Gas, issue, Central government,Home Minister, Parameshwar
The post ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





