21
April, 2026

A News 365Times Venture

21
Tuesday
April, 2026

A News 365Times Venture

ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತ- ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಏಪ್ರಿಲ್, 20,2026 (www.justkannada.in): ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, “2026ರ ಬಸವಶ್ರೀ” ಪ್ರಶಸ್ತಿ ಪ್ರಧಾನ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಭಾಜನರಾಗಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. ಬಸವಣ್ಣನವರು ಸಮಾಜದಲ್ಲಿ ಜಾತಿವರ್ಣ ವ್ಯವಸ್ಥೆಗಳ ವಿರುದ್ಧ ಹೋರಾಡಿದರು. ಮೂಢನಂಬಿಕೆಗಳ ವಿರುದ್ಧ ಧ್ವನಿ ಎತ್ತಿ, ಕರ್ಮ ಸಿದ್ಧಾಂತವನ್ನು ಅಲ್ಲಗಳೆದಿದ್ದರು. ಸಾವಿರಾರು ವರ್ಷಗಳಿಂದ ಶೋಷಿತ ವರ್ಗಗಳು ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿತ್ತು. ಬಸವಾದಿಶರಣರು ವೈದಿಕ ಧರ್ಮಕ್ಕೆ ಪರ್ಯಾಯವಾಗಿ ಲಿಂಗಾಯತ ಧರ್ಮಕ್ಕೆ ನಾಂದಿ ಹಾಡಿದರು. ವೈದಿಕ ಧರ್ಮದಲ್ಲಿ ಚರ್ತುವರ್ಣ ವ್ಯವಸ್ಥೆಯಿತ್ತು. ಆದ್ದರಿಂದ ಹನ್ನರೆಡನೇ ಶತಮಾನದಲ್ಲಿ ಸಮಾನತೆ, ಮಾನವೀಯತೆಯಿಂದ ಕೂಡಿದ ಲಿಂಗಾಯತ ಧರ್ಮವನ್ನು ಸ್ಥಾಪಿಸಲಾಯಿತು ಎಂದರು.

ಸಮಸಮಾಜಕ್ಕೆ ಶ್ರಮಿಸಿದ ಬಸವಾದಿ ಶರಣರು

ವೈರುಧ್ಯತೆಯ ಸಮಾಜದಲ್ಲಿ ಬದಲಾವಣೆ ತರಲು ಬುದ್ಧಬಸವಾದಿ ಶರಣರು ಶ್ರಮಿಸಿದ್ದರು. ಆದರೂ ಇಂದಿಗೂ ಜಾತಿವ್ಯವಸ್ಥೆ ಪ್ರಚಲಿತವಾಗಿದೆ. ಭಾರತದ ಜಾತಿವ್ಯವಸ್ಥೆಗೆ ಚಲನೆಯಿಲ್ಲ. ಆರ್ಥಿಕ ಸಾಮಾಜಿಕ ಶೈಕ್ಷಣಿಕ ಶಕ್ತಿ ದೊರಕಿದಾಗ ಮಾತ್ರ ಚಲನೆಯಿಲ್ಲದ ಜಾತಿವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ. ‘ಇವನಾರವ ಇವನಾರವ’ ಎನ್ನುವ ಬದಲು ಇವ ‘ಇವ ನಮ್ಮವ’ಎನ್ನುವ ವ್ಯವಸ್ಥೆ ಬರುವವರೆಗೂ ಬಸವ ವಿಚಾರಗಳು ಪ್ರಸ್ತುತವಾಗಿರುತ್ತವೆ ಎಂದರು.

ಉತ್ಪಾದಿಸಿದ ಸಂಪತ್ತಿನ ಸಮಾನ ಹಂಚಿಕೆ

ಬಸವಣ್ಣನವರು ಕಾಯಕ ಮತ್ತು ದಾಸೋಹ ತತ್ವವನ್ನು ವಿಶ್ವಕ್ಕೆ ಪರಿಚಯಿಸಿ, ಎಲ್ಲಾ ವೃತ್ತಿಗಳೂ ಘನತೆಯುಳ್ಳದ್ದು ಎಂದಿದ್ದರು. ಉತ್ಪಾದನೆಯಾದ ಸಂಪತ್ತನ್ನು ಸಮಾನವಾಗಿ ಹಂಚಿಕೊಳ್ಳುವುದೇ ಕಾಯಕ ಮತ್ತು ದಾಸೋಹದ ಮೂಲಮಂತ್ರ.  ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ಜಾರಿಗೆ ಬರುವ ಮುಂಚೆ ಮನುಶಾಸ್ತ್ರ ಜಾರಿಯಲ್ಲಿತ್ತು. ಆದ್ದರಿಂದ ಅವರು ಹಿಂದು ಧರ್ಮವನ್ನು ಸುಧಾರಿಸಲು ಸಾಧ್ಯವಾಗಲಿಲ್ಲ ವೆಂದು ಮನುಶಾಸ್ತ್ರವನ್ನು ಸುಡುತ್ತೇನೆ ಎಂದಿದ್ದರು. ಅಸಮಾನತೆಯ ಸಮಾಜದಲ್ಲಿ ಬದಲಾವಣೆ ತರಲು ಪ್ರತಿಯೊಬ್ಬರಿಗೂ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸ್ವಾತಂತ್ರ್ಯ ಅಗತ್ಯ ವೆಂದು ತಿಳಿಸಿದ್ದರು. ಸಮಾಜದ ಅಶಕ್ತರ ಮೇಲೆ ನಡೆದ ಅನ್ಯಾಯಗಳ ಇತಿಹಾಸದ ಬಗ್ಗೆ ಅರಿವಿಲ್ಲದವರು ಇತಿಹಾಸವನ್ನು ನಿರ್ಮಿಸಲು ಸಾಧ್ಯವಿಲ್ಲವೆಂದರು.

ಮನುವಾದಿಗಳು ಮೂಢನಂಬಿಕೆಗಳನ್ನು ಬೆಳೆಸುತ್ತಾರೆ

ಸಮಾಜದಲ್ಲಿ ಅಸಮಾನತೆಯನ್ನು ನಿರಂತರಗೊಳಿಸಲು ಪಟ್ಟಭದ್ರಹಿತಾಸಕ್ತಿಗಳು ಪ್ರಯತ್ನಿಸುತ್ತಿವೆ. ಜಾತಿವ್ಯವಸ್ಥೆ ನಿರ್ಮೂಲನೆಗೆ ವೈಚಾರಿಕ ವೈಜ್ಞಾನಿಕ ಶಿಕ್ಷಣ ಅಗತ್ಯ.  ಆದ್ದರಿಂದ ಯುವಜನತೆ ಮೂಢನಂಬಿಕೆಗಳಿಗೆ ಬಲಿಯಾಗಬಾರದು. ಮನುವಾದಿಗಳು ಮೂಢನಂಬಿಕೆಗಳನ್ನು ಬೆಳೆಸುತ್ತಾರೆ ಎಂದರು.

ಬಸವ ಭವನಕ್ಕೆ 5 ಕೋಟಿ ರೂ.ಗಳ ಅನುದಾನ

ಬಸವ ಭವನಕ್ಕೆ ಐದು ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ದೊರೆಯಬೇಕು

ಸಮಾಜದಲ್ಲಿ ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ದೊರೆಯಬೇಕು ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಯಿತು. ಇದನ್ನೇ ಬಸವ, ಬುದ್ಧ, ಅಂಬೇಡ್ಕರ್ ಹೇಳಿದ್ದು ಎಂದರು. ಬಸವಣ್ಣಪಥದಲ್ಲಿ  ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವ ಬಗ್ಗೆ ಶಪಥ ಮಾಡಬೇಕು. ನಮ್ಮ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋಗಳನ್ನು ಕಡ್ಡಾಯ ಮಾಡಿದ್ದಲ್ಲದೆ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ. ಬಸವಣ್ಣನವರ ಕರ್ಮ ಭೂಮಿ ಅನುಭವ ಮಂಟಪದ ಪುನ: ಸ್ಥಾಪನೆಗೆ ಗೋ.ರು.ಚನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಅದರ ವರದಿಯನ್ವಯ ಅನುದಾನ ನೀಡಲಾಗಿದೆ. ಈ ವರ್ಷದ ಕೊನೆಯಲ್ಲಿ ಪೂರ್ಣಗೊಳ್ಳುವ ಬಗ್ಗೆ ಭರವಸೆಯಿದೆ ಎಂದರು.

ಸರ್ಕಾರಕ್ಕೆ ಬುದ್ಧ, ಬಸವ, ಅಂಬೇಡ್ಕರ್  ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶವಿದೆ.ಬಸವಣ್ಣನವರ ವಿಚಾರಗಳನ್ನು ನಮ್ಮ ಸರ್ಕಾರ ಅನುಸರಿಸುತ್ತಿದೆ. ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್  ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶವನ್ನು ಹೊಂದಿದೆ ಎಂದರು.

ಆರ್ಥಿಕ ಸಾಮಾಜಿಕ ಶಕ್ತಿಯಿಂದ ಚಲನೆ

ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮದವರಿಗೆ ತಲುಪುತ್ತಿದೆ. ಚಲನರಹಿತ ಜಾತಿ ವ್ಯವಸ್ಥೆಯಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿ ದೊರೆತರೆ ಮಾತ್ರ ಚಾಲನೆ ದೊರೆಯುತ್ತದೆ ಎಂದರು.

ಮನುಷ್ಯರಾಗುವ ಪ್ರಯತ್ನ ಮಾಡಬೇಕು

ಎಲ್ಲಾ ಧರ್ಮಗಳೂ ಮತ್ತೊಬ್ಬರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ.ಎಲ್ಲರೂ ಪರಸ್ಪರ ಪ್ರೀತಿಸಬೇಕು ಹಾಗೂ  ಮನುಷ್ಯರಾಗುವ ಪ್ರಯತ್ನ ಮಾಡಬೇಕು, ಬಸವಣ್ಣವನರೂ ಇದನ್ನೇ ಪ್ರತಿಪಾದಿಸಿದ್ದರು ಎಂದರು. ಸರಳವಾಗಿ ಕನ್ನಡದಲ್ಲಿಯೇ ವಚನಗಳನ್ನು ರಚಿಸಿ ಜನಸಾಮಾನ್ಯರಿಗೆ ತಲುಪುವಂತೆ ಮಾಡಿದ್ದಾರೆ ಎಂದರು.

Key words: Basava principles, present, caste system, CM Siddaramaiah

The post ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കയുമായുള്ള ബന്ധത്തിലൂടെ ലഭിച്ചിരുന്ന കരുത്തുകൾ ദുർബലമായി; യു.എസുമായുള്ള സാമ്പത്തിക ബന്ധം അവസാനിപ്പിക്കാനൊരുങ്ങി കാനഡ

ഒട്ടാവ: പതിറ്റാണ്ടുകളായുള്ള പങ്കാളിത്തത്തിന് ശേഷം അമേരിക്കയുമായുള്ള സാമ്പത്തിക ബന്ധം ദൃഢതയില്ലാത്തതായി മാറിയിരിക്കുകയാണെന്ന്...

MI vs GT : ముంబై ఈజ్ బ్యాక్.. తిలక్ వర్మ మెరుపు శతకం.. గుజరాత్ టైటాన్స్ ఘోర పరాజయం..

ఐపీఎల్ 2026 సీజన్‌లో ముంబై ఇండియన్స్ ఎట్టకేలకు అద్భుతమైన ఫామ్‌లోకి వచ్చి...

ഇറാൻ-അമേരിക്ക യുദ്ധം തുടർന്നാൽ എണ്ണ വ്യാപാരത്തിന് ചൈനീസ് യുവാൻ ഉപയോഗിക്കാൻ നിർബന്ധിതരായേക്കുമെന്ന് യു.എ.ഇ

അബുദാബി: എണ്ണ വ്യാപാരത്തിനായി തങ്ങൾ ചൈനീസ് യുവാൻ ഉപയോഗിക്കാൻ നിർബന്ധിതരായേക്കാം എന്ന്...