30
April, 2026

A News 365Times Venture

30
Thursday
April, 2026

A News 365Times Venture

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

Date:

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿರುವ ಕುಮಾರಿ ಮಾಧುರಿ ಅವರ ಮನೆಗೆ ಮಂಗಳವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಮಾಧುರಿ ಅವರ ತಾಯಿ ಸರಿತಾ ಅವರು ಗೃಹಲಕ್ಷ್ಮಿ  ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ಮಗಳ ವಿದ್ಯಾಭ್ಯಾಸಕ್ಕೆ ಬೇಕಿರುವ ಪೂರಕ ಸಾಮಗ್ರಿಗಳನ್ನು ಖರೀದಿಸಲು ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಡಾ.ಪುಷ್ಪಾ ಅಮರನಾಥ್,  ಗ್ಯಾರಂಟಿ ಯೋಜನೆಗಳು  ಜನಸಾಮಾನ್ಯರ ಬದುಕಿನಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬದಲಾವಣೆಯ ಬೆಳಕಾಗಿದೆ. ಇದಕ್ಕೆ ಅನೇಕ ಫಲಶೃತಿಗಳು ನಮ್ಮ ಕಣ್ಮುಂದೆ ಇವೆ. ಇದಕ್ಕೆ ಹೊಸದಾಗಿ ಸೇರ್ಪಡೆಯಾಗಿರುವುದು ಗೃಹಲಕ್ಷ್ಮಿ ಯೋಜನೆಯ ಹಣದ ಸಹಾಯದಿಂದ ಮಾಧುರಿ ಎಂಬ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ 2ನೇ ಸ್ಥಾನ ಪಡೆದಿರುವುದು ಎಂದರು

ಈಕೆಯಂತೆ ಅನೇಕ ಮಕ್ಕಳ ಬದುಕಿನಲ್ಲಿ ಗ್ಯಾರಂಟಿ ಯೋಜನೆಗಳು ಬೆಳಕಾಗಿದೆ. ಕೆಲವು ಮಾತ್ರ ಎಲ್ಲರ ಕಣ್ಣಿಗೆ ಕಂಡರೆ, ಅನೇಕ ಫಲಾನುಭವಿಗಳ ಕಥೆ ಎಲೆಮರೆಯಾಗಿಯೇ ಉಳಿಯುತ್ತವೆ. ಇಂತಹ ಫಲಶೃತಿಗಳು ಕಣ್ಣಮುಂದೆ ಬಂದಾಗೆಲ್ಲ, ಸರ್ಕಾರಕ್ಕೆ ಸಾರ್ಥಕತೆಯ ಭಾವ ಮೂಡುತ್ತದೆ ಎಂದರು.

ಇಂತಹ ಯೋಜನೆ ರೂಪಿಸುವಲ್ಲಿ  ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಶ್ರಮ ಅಪಾರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಅರುಣ್ ಕುಮಾರ್, ಲೋಕೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Key words: Dr. Pushpa Amarnath, congratulates, SSLC 2nd Rank,  student, Mysore

The post SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Story Board : ఇరాన్ యుద్ధం.. గల్ఫ్ భారీ మూల్యం చెల్లించుకోక తప్పదా?

ఇరాన్ యుద్ధం గల్ఫ్ పుట్టి ముంచింది. అమెరికాపై అతిగా ఆధారపడ్డందుకు.. గల్ఫ్...

തമിഴ്‌നാട്ടില്‍ സ്റ്റാലിന്‍ തുടരുമെന്ന് എക്‌സിറ്റ് പോളുകള്‍; 120 സീറ്റുമായി ടി.വി.കെ നിര്‍ണായക ശക്തിയാകുമെന്നും സര്‍വേ

  ചെന്നൈ: തമിഴ്‌നാട്ടില്‍ ഭരണകക്ഷിയായ സ്റ്റാലിന്റെ ഡി.എം.കെ ഭരണം തുടരുമെന്ന് പ്രവചിച്ച്...