1
May, 2026

A News 365Times Venture

1
Friday
May, 2026

A News 365Times Venture

ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಮೇ​ 01,2026 (www.justkannada.in): ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ  ವಿರುದ್ಧ ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ಮೋದಿ ಮಾದರಿ ಎಂದು ಕುಟುಕಿದ್ದಾರೆ.

ನಾವು ಮೊದಲೇ ಎಚ್ಚರಿಸಿದಂತೆ, ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಪ್ರಧಾನಿ ಮೋದಿ ಸರ್ಕಾರವು ಮತ್ತೊಮ್ಮೆ ಬೆಲೆಯನ್ನು ಏರಿಕೆ ಮಾಡಿದೆ. ಚುನಾವಣೆಗಳ ಅವಧಿಯಲ್ಲಿ ದರ ಏರಿಕೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದಿದ್ದ ಸರ್ಕಾರ, ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 993 ರೂ ರಷ್ಟು ಹೆಚ್ಚಿಸಿದೆ. ಕೇವಲ 4 ತಿಂಗಳಲ್ಲಿ, ಕೇಂದ್ರ ಸರ್ಕಾರವು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಆರು ಬಾರಿ ಹೆಚ್ಚಿಸಿದೆ, ಇದರಿಂದ ಸಾಮಾನ್ಯ ಜನರ ಮೇಲೆ 1,518ರೂ ರಷ್ಟು ಹೆಚ್ಚುವರಿ ಹೊರೆ ಬಿದ್ದಿದೆ. ಜಾಗತಿಕವಾಗಿ ಸಮಸ್ಯೆ ಬಂದಾಗ ದೇಶದ ಜನರನ್ನ ರಕ್ಷಿಸುವ ಬದಲು, ಮೋದಿ ದೇಶದ ಜನರ ಮೇಲೆ ಹೊರೆ ಹಾಕುತ್ತಿದ್ದಾರೆ ಎಂದು ಸಿಎಂ ಹರಿಹಾಯ್ದಿದ್ದಾರೆ.

ಟೊಳ್ಳಾದ ವಿದೇಶಾಂಗ ನೀತಿ ನಮ್ಮ ಆರ್ಥಿಕತೆ ರಕ್ಷಿಸಲು ವಿಫಲವಾಗಿದೆ. ಈಗ ಸಾಮಾನ್ಯ ಭಾರತೀಯರು ಅದಕ್ಕೆ ಬೆಲೆಯನ್ನು ಪಾವತಿಸುತ್ತಿದ್ದಾರೆ. ಈ ಹೆಚ್ಚಳವು ಕೇವಲ ವ್ಯವಹಾರಗಳ ಮೇಲೆ ಪರಿಣಾಮ ಬೀರುವುದಿಲ್ಲ, ಹೋಟೆಲ್‌ ಗಳು, ರೆಸ್ಟೋರೆಂಟ್‌ ಗಳು, ಸಣ್ಣ ತಿನಿಸುಗಳು ಹಾಗೂ ಅಡುಗೆ ಸೇವೆಗಳು ಬೆಲೆಗಳನ್ನು ಹೆಚ್ಚಿಸಲು ಒತ್ತಾಯಿಸಲ್ಪಡುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

Key words: Cylinder, price hike, CM, Siddaramaiah

The post ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘കടല്‍ക്കൊള്ള’; സുമുദ് ഫ്‌ളോട്ടില്ല തടഞ്ഞ് ഇസ്രഈല്‍, 175 സന്നദ്ധപ്രവര്‍ത്തകര്‍ കസ്റ്റഡിയില്‍

  ജെറുസലേം: ഗസയിലേക്ക് സഹായമെത്തിക്കുന്ന ഫ്‌ളോട്ടില്ല കപ്പലുകള്‍ തടഞ്ഞ് ഇസ്രഈലി സെന്യം....

"இதுதான் நீங்கள் செலுத்தும் தேர்தல் பில்; அடுத்து பெட்ரோல், டீசல்" – கேஸ் விலை உயர்வு பற்றி ராகுல்

இந்தியாவில் வணிகப் பயன்பாட்டிற்கான எரிவாயு சிலிண்டர் விலை ஒரே நாளில் 993...

TRS : తెలంగాణ రక్షణ సేనలోకి మాజీ మంత్రి.. పార్టీ అధ్యక్షురాలు కవితతో భేటీ

తెలంగాణ రాజకీయాల్లో సీనియర్ నాయకుడు, మాజీ మంత్రి బోడ జనార్దన్ కీలక...

നെതന്യാഹുവിന് മാപ്പ് നല്‍കാന്‍ ഇസ്രഈല്‍ പ്രസിഡന്റിന് മേല്‍ ട്രംപിന്റെ കടുത്ത സമ്മര്‍ദം; ‘മാപ്പ് നല്‍കിയാല്‍ ഹെര്‍സോഗ് നാഷണല്‍ ഹീറോയാകും’

  വാഷിങ്ടണ്‍: അഴിമതിക്കേസുകളില്‍ വിചാരണ നേരിടുന്ന ഇസ്രഈല്‍ പ്രധാനമന്ത്രി ബെഞ്ചമിന്‍ നെതന്യാഹുവിന്...