25
August, 2026

A News 365Times Venture

25
Tuesday
August, 2026

A News 365Times Venture

ಪ.ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಬಳಿಕ ನಿಲ್ಲದ  ಹಿಂಸಾಚಾರ: ನಾಲ್ವರು ಕಾರ್ಯಕರ್ತರ ಹತ್ಯೆ

Date:

ಕೋಲ್ಕತ್ತಾ,ಮೇ,6,2026 (www.justkannada.in):  ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಹೊರ ಬಂದ ಬಳಿಕವೂ ಸಹ ಹಿಂಸಾಚಾರ ನಿಂತಿಲ್ಲ. ಪ. ಬಂಗಾಳ ರಾಜ್ಯದ ವಿವಿಧೆಡೆ ನಡೆದ ಭೀಕರ ಸಂಘರ್ಷಗಳಲ್ಲಿ ಕಳೆದ 24 ಗಂಟೆಗಳಲ್ಲಿ ನಾಲ್ವರು ರಾಜಕೀಯ ಕಾರ್ಯಕರ್ತರ ಹತ್ಯೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯದ ಸುಮಾರು 12ಕ್ಕೂ ಹೆಚ್ಚು ಕಡೆಗಳಲ್ಲಿ ಗುಂಪು ಘರ್ಷಣೆ, ಮನೆಗಳಿಗೆ ಬೆಂಕಿ ಹಚ್ಚುವುದು ಮತ್ತು ದಾಳಿ ಪ್ರಕರಣಗಳು ನಡೆದಿವೆ. ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿ ತಡರಾತ್ರಿ ನಡೆದ ದಾಳಿಯಲ್ಲಿ ಬಿಜೆಪಿ ಕಾರ್ಯಕರ್ತ ಮಧು ಎಂಬುವವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಎನ್ನಲಾಗಿದೆ.  ಈ ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಜೆಪಿ ನಾಯಕರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಕಿಡಿಕಾರಿದ್ದಾರೆ.

ಇತ್ತ  ವೀರಭೂಮಿಯ ನ್ಯೂಟೌನ್ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತ ಅಬೀರ್ ಎಂಬುವವರನ್ನು ಹತ್ಯೆ ಮಾಡಲಾಗಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಪ್ರತಿಪಕ್ಷದ ಬೆಂಬಲಿಗರೇ ಈ ಕೃತ್ಯ ಎಸಗಿದ್ದಾರೆ ಎಂದು ಟಿಎಂಸಿ ಮುಖಂಡರು ಆರೋಪಿಸಿದ್ದಾರೆ. ನಿನ್ನೆಯಷ್ಟೇ ಟಿಎಂಸಿ ನಾಯಕರೊಬ್ಬರ ಕಚೇರಿಯನ್ನ ಧ್ವಂಸ ಮಾಡಲಾಗಿತ್ತು.

Key words: Violence, West Bengal, after, election, activists, killed

The post ಪ.ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಬಳಿಕ ನಿಲ್ಲದ  ಹಿಂಸಾಚಾರ: ನಾಲ್ವರು ಕಾರ್ಯಕರ್ತರ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസയില്‍ ഇസ്രഈല്‍ സൈന്യം കൊലപ്പെടുത്തിയത് 21,500 കുട്ടികളെ; കണക്കുകള്‍ പുറത്തുവിട്ട് മീഡിയ ഓഫീസ്

ഗസസിറ്റി: 2023 ഒക്ടോബറിന് ശേഷം ഗസയില്‍ ഇസ്രഈല്‍ സൈന്യം 21,500 കുട്ടികളെ...

'அதானிக்காக பரந்தூரை காலி செய்ய வேண்டாமென ஸ்டாலினிடம் வலியுறுத்தினோம்… ஆனால்!'- அமைச்சர் வன்னிஅரசு

நேற்று சட்டமன்றத்தில் பேசிய முதல்வர் விஜய் '110' விதியின் கீழ் பரந்தூர்...

Kiss Car: బాయ్‌ ఫ్రెండ్‌ కారుకు 3,400 ముద్దులు.. షాకిచ్చిన పోలీసులు

ప్రేమికుల మధ్య ఉండే సంబంధాన్ని అమ్మాయి-అబ్బాయిలు బహుమతుల ద్వారా వ్యక్తపరుచుకుంటారు. ఒకరికొకరు...

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ...