15
May, 2026

A News 365Times Venture

15
Friday
May, 2026

A News 365Times Venture

ಹಿಜಾಬ್ ವಿವಾದ: ವಿದ್ಯಾರ್ಥಿಗಳನ್ನು ಧಾರ್ಮಿಕವಾಗಿ ಇಬ್ಬಾಗ ಮಾಡುವ ಸಾಧ್ಯತೆ- ಹಿರಿಯ ವಕೀಲ ಅ.ಮ.ಭಾಸ್ಕರ್

Date:

ಮೈಸೂರು,ಮೇ,15,2026 (www.justkannada.in): ರಾಜ್ಯದಲ್ಲಿ ಮತ್ತೆ ಹಿಜಾಬ್ ,ಕೇಸರಿ ಶಾಲಿನ ವಿವಾದ ಮುನ್ನೆಲೆಗೆ ಬಂದಿದ್ದು,ಪರ –ವಿರೋಧ ಚರ್ಚೆಗಳು ಶುರುವಾಗಿದೆ.  ಈ ಕುರಿತು ಪ್ರತಿಕ್ರಿಯಿಸಿರುವ ಮೈಸೂರಿನ ಹಿರಿಯ ವಕೀಲ ಅ.ಮ.ಭಾಸ್ಕರ್, ಧಾರ್ಮಿಕ ಆಚರಣೆ ವಿಷಯ ವಿದ್ಯಾರ್ಥಿಗಳನ್ನು ಧಾರ್ಮಿಕವಾಗಿ ಇಬ್ಬಾಗ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಹಿರಿಯ ವಕೀಲ ಅ.ಮ.ಭಾಸ್ಕರ್, ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಸೀಮಿತ ಧಾರ್ಮಿಕ ಚಿಹ್ನೆಗಳಿಗೆ ಅನುಮತಿ ನೀಡಿರುವ ತೀರ್ಮಾನ ಭಾರತೀಯ ಸಂವಿಧಾನದ ವಿಧಿ 14,19,21 ಮತ್ತು 25ರೊಂದಿಗೆ ನೇರವಾಗಿ ಸಂಬಂಧ ಹೊಂದಿದೆ. ಸಂವಿಧಾನ ಧಾರ್ಮಿಕ ಸ್ವಾತಂತ್ರ್ಯ, ವೈಯಕ್ತಿಕ ಗೌರವ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ. ಅದೇ ವೇಳೆ ಶಿಕ್ಷಣ ಸಂಸ್ಥೆಗಳಿಗೆ ಶಿಸ್ತು ಮತ್ತು ಸಮವಸ್ತ್ರ ನಿಯಮ ಜಾರಿಗೆ ತರುವ ಅಧಿಕಾರವು ಕೂಡ ಇದೆ. ಕರ್ನಾಟಕ ಉಚ್ಚ ನ್ಯಾಯಾಲಯ 2022ರ ತೀರ್ಪಿನಲ್ಲಿ ಬಹಳ ಸ್ಪಷ್ಟವಾಗಿ ಹೇಳಿದೆ. ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಆಚರಣೆ  ಎಂದೂ ಕೂಡ ಸಾಬೀತಾಗಿಲ್ಲ ಎಂದು ಹೇಳಿ ಸಮವಸ್ತ್ರ ನಿಯಮವನ್ನು ಮಾನ್ಯಗೊಳಿಸಿತ್ತು. ಆದರೆ ನಂತರ ವಿಷಯ ಸರ್ವೋಚ್ಚ ನ್ಯಾಯಲಯಕ್ಕೆ ಹೋಗಿ ಅಲ್ಲಿ ವಿಭಜಿತ ತೀರ್ಪು ಬಂದ ಕಾರಣ ಹಿಜಾಬ್ ಧರಿಸಬೇಕೇ ಬೇಡವೇ ಎಂದು ಇಂದಿಗೂ ತೀರ್ಮಾನವಾಗಿಲ್ಲ.

ಪ್ರಸ್ತುತ ಕರ್ನಾಟಕ ಸರ್ಕಾರ ರಿಜನೇಬಲ್ ಅಕಾಮಡೇಷನ್ ಹೊಸ ನಿಯಮ ತಂದು ಧಾರ್ಮಿಕ ಹೊಂದಾಣಿಕೆಯ ದೃಷ್ಟಿಯಿಂದ ಸಮರ್ಥಿಸಬಹುದು. ಆದರೆ, ಇದು ಭವಿಷ್ಯದಲ್ಲಿ ನ್ಯಾಯಾಂಗ ಪರಿಶೀಲನೆಗೆ ಒಳಪಡುವ ಸಾಧ್ಯತೆ ಇದೆ. ಧಾರ್ಮಿಕ ಆಚರಣೆ ವಿಷಯ ವಿದ್ಯಾರ್ಥಿಗಳನ್ನು ಧಾರ್ಮಿಕವಾಗಿ ಇಬ್ಬಾಗ ಮಾಡುವ ಸಾಧ್ಯತೆ ಇದೆ. ಇದರಿಂದ ಸಾಮರಸ್ಯಕ್ಕೆ ಧಕ್ಕೆ ಉಂಟಾಗಲಿದೆ ಎಂದು ತಿಳಿಸಿದ್ದಾರೆ.

Key words: Hijab, controversy, religiously, dividing, students, Senior lawyer, A.M. Bhaskar

The post ಹಿಜಾಬ್ ವಿವಾದ: ವಿದ್ಯಾರ್ಥಿಗಳನ್ನು ಧಾರ್ಮಿಕವಾಗಿ ಇಬ್ಬಾಗ ಮಾಡುವ ಸಾಧ್ಯತೆ- ಹಿರಿಯ ವಕೀಲ ಅ.ಮ.ಭಾಸ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഇതുകൊണ്ടാണ് ഇവരെ കോമാളി നിലവാരത്തില്‍ കാണുന്നത്’; സ്ഥാനമേല്‍ക്കാത്ത സര്‍ക്കാര്‍ വാഗ്ദാനം പാലിക്കാന്‍ ആവശ്യപ്പടുന്ന മഹിളാ മോര്‍ച്ച സമരത്തെക്കുറിച്ച് വി.ടി. ബല്‍റാം

കൊച്ചി: അധികാരത്തിലെത്തിയാല്‍ കെ.എസ്.ആര്‍.ടി.സി. ബസ്സുകളില്‍ സ്ത്രീകള്‍ക്ക് യാത്ര സൗജന്യമാക്കുമെന്നതായിരുന്നു ഇത്തവണ നിയമസഭാ...

`எடப்பாடிதான் எங்கள் தலைவர்; மாற்றுக் கருத்து இல்லை’ – வேலுமணி அணியில் இருந்து தாவிய கே.சி.வீரமணி

அ.தி.மு.க இரண்டாகப் பிளவுப்பட்டுள்ள நிலையில், அந்தக் கட்சியின் முன்னாள் அமைச்சரும் தற்போதைய...

ചോദ്യപേപ്പര്‍ ചോര്‍ച്ച; നീറ്റ് പുനപരീക്ഷ ജൂണ്‍ 21ന്

ന്യൂദല്‍ഹി: രാജ്യത്തെ ഏറ്റവും വലിയ മെഡിക്കല്‍ എന്‍ഡ്രന്‍സ് പരീക്ഷയായ നീറ്റ് പുനപരീക്ഷ...