26
May, 2026

A News 365Times Venture

26
Tuesday
May, 2026

A News 365Times Venture

ಬಿಐಎಎಲ್ ನಲ್ಲಿ ಕೆಎಸ್ ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ: ಹಸ್ತಾಂತರ

Date:

ಬೆಂಗಳೂರು,ಮೇ,25,2026 (www.justkannada.in):  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್) ತನ್ನಲ್ಲಿ ಶೇ.13ರಷ್ಟು ಬಂಡವಾಳ ಪಾಲು ಹೊಂದಿರುವ ರಾಜ್ಯ ಸರಕಾರಿ ಸ್ಯಾಮ್ಯದ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಐಐಡಿಸಿ) 2025-26ನೇ ಸಾಲಿಗೆ ಅನ್ವಯವಾಗುವಂತೆ 16,49,93,400 ರೂ.ಗಳ ಲಾಭಾಂಶವನ್ನು (ಡಿವಿಡೆಂಡ್) ಸೋಮವಾರ ಹಸ್ತಾಂತರಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಐಎಎಲ್ ಅಧ್ಯಕ್ಷ ಹರಿ‌ ಮರಾರ್ ಅವರಿಂದ ಚೆಕ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ , ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯೆಲ್ ಉಪಸ್ಥಿತರಿದ್ದರು.

ಬಿಐಎಎಲ್ 2025-26ನೇ ಸಾಲಿಗೆ ಅನ್ವಯವಾಗುವಂತೆ ಪ್ರತೀ ಷೇರಿಗೆ 3 ರೂ. ಲಾಭಾಂಶ ಘೋಷಿಸಿದೆ. ಇದರಂತೆ ಕೆಎಸ್ ಐಐಡಿಸಿಗೆ 16.49 ಕೋಟಿ ರೂಪಾಯಿ ಒಟ್ಟು ಲಾಭಾಂಶ ಕೊಡಲಾಗಿದೆ. ಇದರಲ್ಲಿ ತೆರಿಗೆ ಕಡಿತದ ನಂತರ ಆ ಸಂಸ್ಥೆಗೆ 14.84 ಕೋಟಿ ರೂಪಾಯಿ ಡಿವಿಡೆಂಡ್ ಸಿಕ್ಕಿದೆ ಎಂದಿದ್ದಾರೆ.

ಈ ಲಾಭಾಂಶ ಘೋಷಣೆಯು ಬಿಐಎಎಲ್ ಸಂಸ್ಥೆಯ ಅತ್ಯುತ್ತಮ ಆರ್ಥಿಕ ನಿರ್ವಹಣೆಯ ಸಂಕೇತವಾಗಿದೆ. ಸಂಸ್ಥೆಯಲ್ಲಿ ಕೆಎಸ್ ಐಐಡಿಸಿ ರಾಜ್ಯ ಸರಕಾರವನ್ನು ಪ್ರತಿನಿಧಿಸುತ್ತಿದೆ. ಬಿಐಎಎಲ್ ಸಂಸ್ಥೆಯು 2017-18ರ ಬಳಿಕ ಇದೇ ಮೊದಲ ಬಾರಿಗೆ ಡಿವಿಡೆಂಡ್ ಘೋಷಿಸಿದೆ. ಏತನ್ಮಧ್ಯೆ ನಾವು ಬಂದ ಲಾಭವನ್ನು ಮೂಲಸೌಕರ್ಯ ಮತ್ತು ಸಾಮರ್ಥ್ಯ ವಿಸ್ತರಣೆಯಂತಹ  ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳನ್ನು ದೃಢಗೊಳಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಮಿಕ್ಕಂತೆ ಬಿಐಎಎಲ್ ನಲ್ಲಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಶೇ.13, ಎಫ್ ಐಎಚ್ ಮಾರಿಷಸ್ ಇನ್ವೆಸ್ಟ್ ಮೆಂಟ್ಸ್ ಲಿಮಿಟೆಡ್ ಶೇಕಡ 30.36 ಮತ್ತು ಆ್ಯಂಕರೇಜ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟಮೆಂಟ್ಸ್ ಹೋಲ್ಡಿಂಗ್ಸ್ ಲಿಮಿಟೆಡ್ ಶೇಕಡ 43.64ರಷ್ಟು ಬಂಡವಾಳ ಪಾಲು ಹೊಂದಿವೆ ಎಂದು ಅವರು ನುಡಿದಿದ್ದಾರೆ.

Key words: KSIIDC,  Rs 16.49 crore, BIAL, Dividend , CM Siddaramaiah

The post ಬಿಐಎಎಲ್ ನಲ್ಲಿ ಕೆಎಸ್ ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ: ಹಸ್ತಾಂತರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അന്‍സിബയുടെ മനസില്‍ ആരോ വിഷം കുത്തിവെച്ചിട്ടുണ്ട്; അമ്മ എക്‌സിക്യൂട്ടീവ് കമ്മിറ്റി മുഴുവന്‍ പിരിച്ച് വിടണം: മല്ലികാ സുകുമാരന്‍

കൊച്ചി: താരസംഘടനായ അമ്മയുമായി ബന്ധപ്പെട്ട വിഷയത്തില്‍ രൂക്ഷ വിമര്‍ശനവുമായി നടി മല്ലികാ...

ஈரான் மீது அமெரிக்கா மீண்டும் தாக்குதல்; போர் நிறுத்தத்தின்போது இந்தத் தாக்குதல் ஏன்?

'ஈரானுடன் இறுதிக்கட்ட பேச்சுவார்த்தையை நெருங்கிவிட்டோம்' என்று அமெரிக்க அதிபர் ட்ரம்ப் கூற,...

Minister Narayana: అమరావతిపై వైసీపీ తప్పుడు ప్రచారం.. మంత్రి నారాయణ ఫైర్

Minister Narayana: రాజధాని అమరావతి నిర్మాణంపై వైసీపీ నేతలు చేస్తున్న వ్యాఖ్యలపై...

വഖഫ് ഭൂമി; വി.ഡി സതീശന്റേത് അധികാര സ്ഥാനത്തിരുന്നുകൊണ്ട് നിയമ വ്യവസ്ഥയോടുള്ള വെല്ലുവിളി: നാഷണല്‍ ലീഗ്

  തിരുവനന്തപുരം: വഖഫ് ഭൂമി വിഷയത്തിലുള്ള മുഖ്യമന്ത്രി വി.ഡി സതീശന്റെ നിലപാടിനെതിരെ...