ಕಲಬುರುಗಿ,ಜೂನ್,1,2026 (www.justkannada.in): ದೇಶದಲ್ಲಿ ಮತ್ತೆ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೋದಿಯವರು ದಿನ ಬಿಟ್ಟು ದಿನ ಗ್ಯಾಸ್, ತೈಲೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ ವಿಶ್ವಾಸ ಕಳೆದುಕೊಂಡಿದ್ದಾರೆ ಬರೀ ವಿಪಕ್ಷಗಳ ಸಹಕಾರ ಇಲ್ಲ ಅಂತಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ಮನ್ರೇಗಾ ಸೇರಿ ಹಲವು ಕಾರ್ಯಕ್ರಮಕ್ಕೆ ಹಣವಿಲ್ಲ. ಇದು ಮಾತನ ಮಲ್ಲ ಸರ್ಕಾರವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.
Key words: Modi, Mallikarjuna Kharge, gas cylinder, price hike
The post ಮೋದಿಗೆ ಜನರ ಬಗ್ಗೆ ಕಾಳಜಿ ಇಲ್ಲ- ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಖರ್ಗೆ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





