3
June, 2026

A News 365Times Venture

3
Wednesday
June, 2026

A News 365Times Venture

ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್

Date:

ಮೈಸೂರು, ಜೂನ್,2,2026 (www.justkannada.in):  ಜಯದೇವ ಹೃದ್ರೋಗ ಸಂಸ್ಥೆಯಿಂದ ಚಾಮರಾಜನಗರ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಚಾಮರಾಜನಗರದಲ್ಲಿ ವಾರಕ್ಕೊಮ್ಮೆ ಸಾರ್ವಜನಿಕರಿಗೆ ಹೃದಯ ತಪಾಸಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಬಿ. ದಿನೇಶ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಡಾ. ಬಿ. ದಿನೇಶ್ ಅವರು, ಗಡಿನಾಡು  ಚಾಮರಾಜನಗರದಲ್ಲಿ ಸಣ್ಣ ಹೃದ್ರೋಗ ಘಟಕವನ್ನು ಪ್ರಾರಂಭ ಮಾಡಿ ಪ್ರತಿ ಸೋಮವಾರ ಅಥವಾ ಬುಧವಾರ ಹೃದಯ ಸಮಸ್ಯೆ ಇರುವವರಿಗೆ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆತಂದು ಚಿಕಿತ್ಸೆ ನೀಡಲಾಗುವುದು ಎಂದರು.

ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಹೃದಯಾಘಾತದ ಬಗ್ಗೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ಉತ್ತರ ಭಾರತದಲ್ಲಿ ಬಿಸಿಲಿನ ದಗೆಗೆ ಶರೀರದಲ್ಲಿ ನೀರಿನ ಕೊರತೆ ಉಂಟಾಗಿ ಬೇರೆ ಬೇರೆ ಖಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಆದ್ದರಿಂದ ಹೃದಯ ರೋಗಿಗಳು ಪ್ರತಿ 3 ತಿಂಗಳಿಗೊಮ್ಮೆ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕು. ಯುವಕರಲ್ಲಿ ಹೆಚ್ಚಾಗಿ ಹೃದಯಾಘಾತವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಯುವಕರು ಮದ್ಯಪಾನ, ಧೂಮಪಾನ, ಮಾದಕವಸ್ತುಗಳ ಸೇವನೆಯನ್ನು ತ್ಯಜಿಸಿ ಉತ್ತಮವಾದ ಆರೋಗ್ಯಶೈಲಿಯನ್ನು ಅಳವಡಿಸಿಕೊಳ್ಳಬೇಕು. ವ್ಯಾಯಾಮ, ವಾಕಿಂಗ್ ಮಾಡಬೇಕು. ಮನೆ ಆಹಾರ, ಸೊಪ್ಪು, ಕಾಳು, ತರಕಾರಿಗಳನ್ನು ಹೆಚ್ಚಾಗಿ ಉಪಯೋಗಿಸಬೇಕು. ಬೇಕರಿ ತಿಂಡಿಗಳನ್ನು ತಿನ್ನಬಾರದು. 40 ವರ್ಷ ಮೇಲ್ಪಟ್ಟವರು ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮವಾದ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅವರು ಸಲಹೆ ನೀಡಿದರು.

ಬೆಂಗಳೂರಿನ ಗೋವಿಂದರಾಜನಗರ, ಚರಕ ಆಸ್ಪತ್ರೆಗಳಲ್ಲಿಯೂ 3 ತಿಂಗಳಲ್ಲಿ ಜಯದೇವ ಹೃದ್ರೋಗ ಘಟಕ ಪ್ರಾರಂಭಿಸಲಾಗುತ್ತಿದೆ. ಮೈಸೂರಿನಲ್ಲಿ 200 ಹಾಸಿಗೆ ಹೆಚ್ಚುವರಿ ಕಟ್ಟಡಕ್ಕೆ 1 ತಿಂಗಳಲ್ಲಿ ಶಂಕುಸ್ಥಾಪನೆ ಮಾಡುತ್ತೇವೆ. ಸೆಪ್ಟಂಬರ್‍ ನಲ್ಲಿ ಹುಬ್ಬಳ್ಳಿಯಲ್ಲಿ 437 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಆಸ್ಪತ್ರೆ ಸಾರ್ವಜನಿಕರ ಸೇವೆಗೆ ಸಿದ್ಧವಾಗುತ್ತಿದೆ ಎಂದರು.

Key words: weekly, heart, check-ups, Jayadeva,  Chamarajanagar, Dr. B. Dinesh

The post ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അത് ഞങ്ങളുടെ തെറ്റ്; സി.പി.ഐ.എം ചെയ്തതായിരുന്നു ശരിയെന്ന് മമത; റിതാബ്രതയ്‌ക്കെതിരെ രൂക്ഷ വിമര്‍ശനം

കൊല്‍ക്കത്ത: തൃണമൂല്‍ കോണ്‍ഗ്രസ് പിളര്‍പ്പിലേക്ക് പോകുമെന്ന ആശങ്ക ഉയരുന്നതിനിടെ പശ്ചിമ ബംഗാളില്‍...

`விஜய் Bro… உங்களை இயலாதவர் என்று சொல்வதில் என்ன தவறு?'- முதல்வரின் விமர்சனங்களுக்கு ஆ.ராசா பதில்!

முதல்வர் விஜய் திருச்சி கிழக்கு, பெரம்பூர் என இரண்டு தொகுதிகளில் தேர்தலை...

Vaibhav Sooryavanshi: చిన్న వయసులో భారీ విజయం.. వైభవ్‌ సూర్యవంశీపై ఐఐఎం 3 నెలల పరిశోధన

Vaibhav Sooryavanshi: ఐపీఎల్ 2026లో తన అద్భుతమైన బ్యాటింగ్‌తో ఎన్నో రికార్డులను...

ലെബനന്‍: ട്രംപിന്റെ വെടിനിര്‍ത്തല്‍ പ്രഖ്യാപനത്തിന് ശേഷവും ഇസ്രഈല്‍ ആക്രമണം തുടരുന്നു

വാഷിങ്ടണ്‍: ലെബനനില്‍ ഇസ്രഈലും ഹിസ്ബുല്ലയും സംഘര്‍ഷം കുറയ്ക്കാന്‍ ധാരണയിലെത്തിയതായി യു.എസ് പ്രസിഡന്റ്...