9
June, 2026

A News 365Times Venture

9
Tuesday
June, 2026

A News 365Times Venture

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ

Date:

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ನಂತರ 13 ಮಂದಿ ಸಚಿವರಾಗಿ ಪದಗ್ರಹಣ ಮಾಡಿದ್ದು ಮೊದಲ ಬಾರಿಗೆ ಸಚಿವರಾಗಿ ಯತೀಂದ್ರ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಯತೀಂದ್ರ ಸಿದ್ದರಾಮಯ್ಯ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರ್ ಖಂಡ್ರೆ, ಭೈರತಿ ಸುರೇಶ್, ಎಂ.ಬಿ ಪಾಟೀಲ್, ರಾಮಲಿಂಗರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ , ಯು ಟಿ ಖಾದರ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಯತೀಂದ್ರ ಸಿದ್ದರಾಮಯ್ಯ ಮತ್ತು ಯು.ಟಿ ಖಾದರ್ ಅವರನ್ನ ಹೊರತುಪಡಿಸಿ ಉಳಿದವರು ಸಿದ್ದರಾಮಯ್ಯ ಸಂಪುಟದಲ್ಲೂ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಆಗಿದ್ದರು. ಉಳಿದ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ಇದ್ದು  ಶಾಸಕರು ಲಾಬಿ ಹೆಚ್ಚಾಗಿದೆ.  ಇನ್ನು ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು ಸೇರಿ ಹಲವರು  ಪಾಲ್ಗೊಂಡಿದ್ದರು.

Key words: Yathindra Siddaramaiah, oath, minister, first time

The post ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നവകേരള രക്ഷാപ്രവര്‍ത്തനം’: മുന്‍ മുഖ്യമന്ത്രിയുടെ ഗണ്‍മാന്‍ ഉള്‍പ്പെടെയുള്ളവര്‍ക്ക് മുന്‍കൂര്‍ ജാമ്യം

തിരുവനന്തപുരം: നവകേരള യാത്രയ്ക്കിടെ ആലപ്പുഴയില്‍ വെച്ച് യൂത്ത് കോണ്‍ഗ്രസ് പ്രവര്‍ത്തകരെ മര്‍ദിച്ച...

அனல் பறந்த ஆலோசனைக் கூட்டம்: காங்கிரஸை வறுத்தெடுத்த மாநிலக் கட்சிகள்; 'அன்போடு' ராகுல் காந்தி பதில்!

டெல்லியில் ஜூன் 8 (நேற்று) நடைபெற்ற இந்தியா கூட்டணியின் ஆலோசனைக் கூட்டத்தில்,...

India Rank: ప్రపంచ టాప్-5 సైనిక శక్తుల్లో భారత్.. భారీగా అణ్వాయుధాలు, రక్షణ వ్యయం..

India Rank: ప్రపంచ దేశాలు రక్షణ వ్యయాన్ని భారీగా పెంచినట్లు స్టాక్‌హోమ్...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ

ಬಾಗಲಕೋಟೆ, ಜೂ.9,2026 (www.justkannada.in): ‘ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಚೋರರು...