19
June, 2026

A News 365Times Venture

19
Friday
June, 2026

A News 365Times Venture

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

Date:

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು ಅರಮನೆ ಆವರಣದಲ್ಲಿ 12 ನೇ ಅಂತರಾಷ್ಟ್ರೀಯ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ತಿಳಿಸಿದರು‌.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ  ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಜನರು ಯೋಗವನ್ನು ಯೋಗದಿನಕ್ಕೆ ಮಾತ್ರ ಮೀಸಲಿಡದೆ  ಯೋಗಾಭ್ಯಾಸವನ್ನು  ಪ್ರತಿದಿನ ಅಳವಡಿಸಿಕೊಳ್ಳಬೇಕು. ಯೋಗದ ವಿವಿಧ ಆಸನಗಳಿಂದ ದೇಹದ ಎಲ್ಲಾ ಸ್ನಾಯು ಹಾಗೂ ನರಗಳಿಗೆ ವ್ಯಾಯಾಮ ನೀಡಿ ಆರೋಗ್ಯಯುತ ಜೀವನಕ್ಕೆ ಸಹಾಯಕವಾಗುತ್ತದೆ ಎಂದರು.

ಜೂನ್ 21 ರಂದು ಬೆಳಿಗ್ಗೆ 6 ರಿಂದ 8ರವರೆಗೆ ವಿವಿಧ ಆಸನಗಳನ್ನು ಪ್ರದರ್ಶಿಸಲಾಗುವುದು. ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಕಾರ್ಯಕ್ರದಲ್ಲಿ ಯಾವುದಾದರೂ ಹೊಸತನವನ್ನು ತರಬಯಿಸಿದರೆ, ಈ ಕುರಿತು ಮುಕ್ತವಾಗಿ ಚರ್ಚಿಸುವಂತೆ ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅರಮನೆ ಆವರಣದ ಸ್ವಚ್ಛತೆ, ಕುಡಿಯುವ ನೀರು, ಅರಮನೆ ಮಂಡಳಿ ವತಿಯಿಂದ ವೇದಿಕೆ, ಧ್ವನಿವರ್ಧಕ, ಪೊಲೀಸ್ ಇಲಾಖೆಯಿಂದ ಬಂದೋಬಸ್ತ್  ವ್ಯವಸ್ಥೆ ಮಾಡಬೇಕು ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾ ದೇವಿ ಅವರು ಮಾತನಾಡಿ ಈಗಾಗಲೇ ಯೋಗದಿನವನ್ನು ಪ್ರತಿದಿನ ಅಭ್ಯಾಸ ಮಾಡಲು ದಿನನಿತ್ಯ ಯೋಗ ಯೋಜನೆಯಡಿ ಜೂನ್ 22 ರಿಂದ ಒಂದು ವರ್ಷ 365 ದಿನ  ಜನರಿಗೆ ಆನ್ ಲೈನ್ ಮೂಲಕ ಲಿಂಕ್ ಒದಗಿಸಲಾಗುವುದು ಎಂದರು.

ಯೋಗ ಫೆಡರೇಷನ್ ಮುಖ್ಯಸ್ಥ ಶ್ರೀಹರಿ ಅವರು ಮಾತನಾಡಿ, ಮೈಸೂರನ್ನು ಯೋಗ ಹಬ್ ಮಾಡಲು ಜೂನ್  21 ರಂದು 120 ಸ್ಥಳಗಳಲ್ಲಿ ಯೋಗ ಪ್ರದರ್ಶನ ನೀಡಲು ಯೋಜಿಸಲಾಗಿದೆ. 1200 ತರಬೇತುದಾರರೊಂದಿಗೆ  1,20, 000 ಜ‌ನರು ಭಾಗವಹಿಸುವಂತೆ ಮಾಡಲು ಉದ್ದೇಶಿಸಲಾಗಿದೆ ಎಂದರು. ಇದೇ ಸಂರ್ಭದಲ್ಲಿ ಯೋಗದಿನದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ  ಸಹಾಯಕ ಪೊಲೀಸ್ ಆಯುಕ್ತ ರಾಘವೇಂದ್ರ, ಪ್ರವಾಸೋದ್ಯಮ‌ ಇಲಾಖೆ ಸಹಾಯಕ ನಿರ್ದೇಶಕ ಪ್ರಭು, ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Key words: International Yoga Day, June 21, Mysore, ADC

The post ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റ് ക്രമക്കേട്; ആത്മഹത്യ ചെയ്ത കുട്ടികളുടെ കുടുംബങ്ങള്‍ക്ക് ഒരു കോടി രൂപ നഷ്ടപരിഹാരം നല്‍കണം: മോദിക്ക് തുറന്ന കത്തുമായി സി.ജെ.പി

ന്യൂദല്‍ഹി: പ്രധാനമന്ത്രി നരേന്ദ്ര മോദിക്ക് തുറന്ന കത്തുമായി കോക്രോച്ച് ജനതാ പാര്‍ട്ടി...

நிறுத்தப்பட்ட சட்டமன்ற ஒளிபரப்பு: "முழு நேரலை..முழு நேரலை…அத்தனையும் உருட்டா சார்! – அதிமுக கேள்வி

தமிழக சட்டமன்றத்தின் 2-வது கூட்டத்தொடர் இன்று (ஜூன்.19) நடைபெற்றது. மேகதாது விவகாரத்தில்...

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ...