16
July, 2026

A News 365Times Venture

16
Thursday
July, 2026

A News 365Times Venture

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ

Date:

ಬಾಗಲಕೋಟೆ, ಜೂ.9,2026 (www.justkannada.in): ‘ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಚೋರರು ಸರ್ಕಾರಿ ನೌಕರರೊಬ್ಬರ ಬಳಿ 83.82 ಲಕ್ಷ ರೂ. ದೋಚಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆ ಪುನರ್ವಸತಿ ಮತ್ತು ಪುನರ್ನಿರ್ಮಾಣ ಕಚೇರಿಯ ಹಿರಿಯ ಟೈಪಿಸ್ಟ್‌ ಹೆಚ್.ವಿ. ಸುರೇಶ್ ರಾವ್ (59) ವಂಚನೆಗೊಳಗಾದ ವ್ಯಕ್ತಿ. ನಕಲಿ ಪೊಲೀಸ್ ಠಾಣೆ, ನಕಲಿ ವಕೀಲರು ಹಾಗೂ ನಕಲಿ ಜಡ್ಜ್ ಸೃಷ್ಟಿಸಿ ಬೆದರಿಕೆ ಹಾಕಿದ ವಂಚಕರ ಗ್ಯಾಂಗ್, ಅವರಿಂದ ಬರೋಬ್ಬರಿ 83.22 ಲಕ್ಷ ರೂ. ಸುಲಿಗೆ ಮಾಡಿದೆ. ಈ ಸಂಬಂಧ ಬಾಗಲಕೋಟೆ ಸಿಇಎನ್ (CEN) ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರೇಶ್ ರಾವ್ ಅವರಿಗೆ ವಂಚಕರ ಗ್ಯಾಂಗ್ ವಿವಿಧ ನಂಬರ್‌ಗಳಿಂದ ಕರೆ ಮಾಡಿ, ತಾವು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಇಲಾಖೆಯಿಂದ ಮಾತನಾಡುತ್ತಿರುವುದಾಗಿ ನಂಬಿಸಿ. “ನಿಮ್ಮ ಆಧಾರ್ ಕಾರ್ಡ್ ಬಳಸಿ ಖರೀದಿಸಲಾದ ಸಿಮ್ ಕಾರ್ಡ್ ಒಂದರಿಂದ ಸಾರ್ವಜನಿಕರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಮ್ಮ ಮೇಲೆ ಮುಂಬೈ ಕ್ರೈಂ ಬ್ರ್ಯಾಂಚ್‌ನಲ್ಲಿ ಎಫ್‌ಐಆರ್ ದಾಖಲಾಗಿದೆ” ಎಂದು  ಬೆದರಿಕೆ ಹಾಕಿದ್ದರು. ಅಲ್ಲದೆ ಈ ಕೇಸ್​​​​​​ ಕೈಬಿಡಲು ಮತ್ತು ಎಫ್‌ಐಆರ್ ರದ್ದುಪಡಿಸಲು ಹಣವನ್ನು ಹಾಕಿಸಿಕೊಂಡಿದ್ದರು.

ಇದಾದ ನಂತರ ಪ್ರಕರಣವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ಲಿಯರ್ ಮಾಡಲು ಕ್ರಿಪ್ಟೋ ಕರೆನ್ಸಿ ಖರೀದಿಸಿ ಅಮೆರಿಕನ್ ಡಾಲರ್‌ಗೆ ಕನ್ವರ್ಟ್ ಮಾಡಬೇಕು ಎಂದು ನಂಬಿಸಿದ್ದರು. ಇದನ್ನು ನಂಬಿದ ನೌಕರ ಸುರೇಶ್ ರಾವ್, ಫೆಬ್ರವರಿಯಿಂದ ಏಪ್ರಿಲ್ ಅವಧಿಯಲ್ಲಿ ಬೆಳಗಾವಿ ಮೂಲದ ಶಂಕರ್ ಶಿಂಧೆ ಎಂಬುವವರಿಂದ 38 ಲಕ್ಷ ರೂಪಾಯಿ ಮೌಲ್ಯದ ಯುಎಸ್‌ ಡಿಟಿ ಡಾಲರ್ ಖರೀದಿಸಿ ವಂಚಕರ ಖಾತೆಗೆ ವರ್ಗಾಯಿಸಿದ್ದರು.

ಬಳಿಕ ತಾವು ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆಯಾಗಿರುವುದು ಸುರೇಶ್ ರಾವ್ ಅವರಿಗೆ ತಿಳಿದಿದ್ದು. ಈ ಕುರಿತು, ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

Key words: Fraud, Digital Arrest, Government employee

The post ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നീ മുസ്‌ലിം അല്ലേ’ എന്ന് ചോദിച്ച് കുത്തിയത് 15 തവണ; ഇന്ത്യന്‍ യുവാവിന് നേര്‍ക്ക് യു.എസില്‍ വംശീയ ആക്രമണം

വാഷിങ്ടണ്‍: യുഎസിലെ യൂട്ട സംസ്ഥാനത്ത് ഇന്ത്യക്കാരനായ യുവാവിന് നേര്‍ക്ക് വംശീയ ആക്രമണം....

தரையில் அமரும் பயணிகள்; மூக்கை பிடிக்கும் அளவுக்கு சுகாதார சீர்கேடு- பெரம்பலூர் பேருந்து நிலைய அவலம்

பெரம்பலூர் புதிய பேருந்து நிலையத்தில் மாணவர்கள், பணிக்குச் செல்வோர், ஊர்களுக்குச் செல்வோர்...

HMDA చీఫ్ ఇంజనీర్ పై ACB ఉక్కుపాదం.. 20 గంటల సోదాలు.. రూ.100 కోట్ల ఆస్తుల గుర్తింపు.!

HMDA Chief Engineer Asset: హైదరాబాద్ మెట్రోపాలిటన్ డెవలప్‌మెంట్ అథారిటీ (HMDA)...

ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

ಬೆಂಗಳೂರು, ಜುಲೈ,14,2026 (www.justkannada.in): 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ...