17
June, 2026

A News 365Times Venture

17
Wednesday
June, 2026

A News 365Times Venture

ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ

Date:

ಮೈಸೂರು,ಜೂನ್,15,2026 (www.justkannada.in):  ಬಾರ್ ಅಂಡ್ ರೆಸ್ಟೋರೆಂಟ್ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್  ನಿಂದ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿ 7 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ದಟ್ಟಗಳ್ಳಿ ನೇತಾಜಿ ವೃತ್ತದ ಬಳಿ ಇರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್‌ ನಲ್ಲಿ ಈ ಘಟನೆ ನಡೆದಿದೆ. ಸಾಹಿಲ್ ಮತ್ತು ಪ್ರಕಾಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. 7 ಜನರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಸುಯೋಗ ಹಾಗೂ ಅಪೋಲೋ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ.

ಹೋಟೆಲ್ ನಲ್ಲಿ 25 ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ಫೈರ್ ಇಂಜಿನ್ ತಂಡದಿಂದ 7 ಜನರ ರಕ್ಷಣೆ ಮಾಡಲಾಗಿದೆ.  ಅಗ್ನಿ ಅವಘಡದ ವೇಳೆ  ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಆತಂಕಗೊಂಡ ಕೆಲವರು ಮೇಲಂತಸ್ತಿನಿಂದ ಜಿಗಿದು ಪಾರಾಗಲು ಯತ್ನಿಸಿದರು.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Mysore,  Fire, bar and restaurant, 2 dead, 7 seriously

The post ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വേള്‍ഡ് മെഡിക്കല്‍ അസോസിയേഷനില്‍ നിന്ന് ഇസ്രഈലിനെ പുറത്താക്കണം; ആഗോളതലത്തില്‍ പ്രതിഷേധം

ലണ്ടന്‍: ഗസയില്‍ ഇസ്രഈല്‍ തുടരുന്ന സൈനിക ആക്രമണങ്ങളില്‍ ആഗോള മെഡിക്കല്‍ എത്തിക്‌സ്...

'மொத்தக் கடன் 13.18 லட்சம் கோடி; நலத்திட்டங்களுக்கு மட்டும் 25,000 கோடி.!' -அரசின் வெள்ளை அறிக்கை

தமிழகத்தின் நிதிநிலை குறித்து நிதியமைச்சர் மரிய வில்சன் வெள்ளை அறிக்கை வெளியிட்டிருக்கிறார்....

Honeymoon Mystery: హనీమూన్‌‌ మిస్టరీ.. ముస్సోరీలో విశాఖ మహిళ మృతి..

Honeymoon Mystery: యువజంట హనీమూన్ మిస్టరీగా మారింది. ఉత్తరాఖండ్ ముస్సోరీలో ఉన్న...

ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ

ಮಂಗಳೂರು,ಜೂನ್,16,2026 (www.justkannada.in): ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್...