9
July, 2026

A News 365Times Venture

9
Thursday
July, 2026

A News 365Times Venture

SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

Date:

ಮೈಸೂರು, ಜುಲೈ 7,2026 (www.justkannada.in):  ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಿಳಿಗೆರೆ, ವರುಣ ಹಾಗೂ ತಿ. ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಇಂದು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಬೂತ್ ಮಟ್ಟದ ಸಭೆ ನಡೆಯಿತು.

ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಕುರಿತು ಪಕ್ಷದ ಕಾರ್ಯಕರ್ತರಿಗೆ ಸಮಗ್ರ ಮಾಹಿತಿ ನೀಡಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳನ್ನು ನಿಯಮಾನುಸಾರ ಮಾಡಿಸಿಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ಮತ್ತು ಅರಿವು ಮೂಡಿಸುವಂತೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಸಮರ್ಪಕವಾಗಿ ಚಲಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕರೆ ನೀಡಿದರು.

Key words: SIR, awareness, Minister, Yathindra Siddaramaiah, instructs

The post SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഷറ അസാധാരണ നേതാവ്; സിറിയയെ ഭീകരവാദത്തെ പിന്തുണയ്ക്കുന്ന രാജ്യങ്ങളുടെ പട്ടികയില്‍ നിന്ന് ഒഴിവാക്കാനൊരുങ്ങി ട്രംപ്

വാഷിങ്ടണ്‍: സിറിയയെ ഭീകരതയെ പിന്തുണയ്ക്കുന്ന രാജ്യങ്ങളുടെ പട്ടികയില്‍ നിന്ന് നീക്കം ചെയ്യാനൊരുങ്ങി...

"நீங்கள் தாக்கினால், உங்களுக்கும் திருப்பி அடி விழும்" – அமெரிக்காவிற்கு ஈரான் கடும் எச்சரிக்கை

ஈரான், அமெரிக்கா இடையே மீண்டும் போர் தொடங்கியுள்ளது. ஈரானின் சபஹார் துறைமுகம்,...

Sajjala Ramakrishna Reddy: వైఎస్సార్ సంక్షేమ వారసత్వాన్ని జగన్ కొనసాగిస్తున్నారు.. మళ్లీ వైసీపీ విజయం ఖాయం..

Sajjala Ramakrishna Reddy: అమరావతిలో వైసీపీ రాష్ట్ర కో-ఆర్డినేటర్ సజ్జల రామకృష్ణారెడ్డి...

അവര്‍ക്ക് ശക്തമായ തിരിച്ചടി നല്‍കും; ഇറാനുമായുള്ള വെടിനിര്‍ത്തല്‍ കരാര്‍ അവസാനിച്ചുവെന്ന് ട്രംപ്

വാഷിങ്ടണ്‍: ബുധനാഴ്ച രാത്രി ഇറാനെതിരെ ശക്തമായ ആക്രമണങ്ങള്‍ നടത്തുമെന്ന മുന്നറിയിപ്പുമായി യു.എസ്...