18
August, 2026

A News 365Times Venture

18
Tuesday
August, 2026

A News 365Times Venture

ತಂಬಾಕು ಬೆಳೆಗಾರರಿಗೆ ಹೆಚ್ಚಿದ ಆರ್ಥಿಕ ನೆರವು: ಸಂಸದ ಯದುವೀರ್ ನಿರಂತರ ಪ್ರಯತ್ನಕ್ಕೆ ಸಿಕ್ಕ ಫಲ

Date:

ಮೈಸೂರು, ಜುಲೈ 23, 2026 (www.justkannada.in): ಪ್ರಾಕೃತಿಕ ವಿಕೋಪಗಳಿಂದ ಹಾನಿಗೊಳಗಾದ ಎಫ್‌ಸಿವಿ (FCV) ತಂಬಾಕು ಬೆಳೆಗಾರರಿಗೆ ಮಹತ್ವದ ಪರಿಹಾರವಾಗಿ, ಭಾರತ ಸರ್ಕಾರವು ತಂಬಾಕು ಮಂಡಳಿಯ ಮೂಲಕ ನೀಡಲಾಗುವ ಅನುದಾನ ಮತ್ತು ಬಡ್ಡಿರಹಿತ ಸಾಲದ ಮೊತ್ತವನ್ನು ಹೆಚ್ಚಿಸಿದೆ.

ಈ ಮಹತ್ವದ ನಿರ್ಧಾರವು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹಾಗೂ ತಂಬಾಕು ಮಂಡಳಿಯ ಮುಂದೆ ರೈತರ ಪರವಾಗಿ ನಿರಂತರವಾಗಿ ಮನವಿ ಸಲ್ಲಿಸಿ, ಪರಿಣಾಮಕಾರಿ ಪ್ರತಿನಿಧಿತ್ವ ವಹಿಸಿದ್ದರ ಫಲವಾಗಿದೆ.

ಪ್ರಾಕೃತಿಕ ವಿಕೋಪಗಳಿಂದ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟವನ್ನು ಮನಗಂಡು, ಅವರಿಗೆ ನೀಡಲಾಗುತ್ತಿರುವ ಆರ್ಥಿಕ ನೆರವನ್ನು ಹೆಚ್ಚಿಸಬೇಕೆಂದು ಯದುವೀರ್ ಅವರು ಕೇಂದ್ರ ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸಿದ್ದರು. ಇದರ ಪರಿಣಾಮವಾಗಿ ತಂಬಾಕು ಮಂಡಳಿಯು ಅನುದಾನ ಹಾಗೂ ಬಡ್ಡಿರಹಿತ ಸಾಲದ ಮೊತ್ತವನ್ನು ₹50,000 ರಿಂದ ₹75,000ಕ್ಕೆ ಹೆಚ್ಚಿಸುವುದರೊಂದಿಗೆ, ಇತರೆ ನೆರವಿನ ವಿಭಾಗಗಳಲ್ಲಿಯೂ ಪರಿಷ್ಕೃತ ಮಾರ್ಗಸೂಚಿಗಳಂತೆ ಆರ್ಥಿಕ ನೆರವನ್ನು ಹೆಚ್ಚಿಸಿದೆ.

ಈ ನಿರ್ಧಾರಕ್ಕೆ ಸ್ಪಂದಿಸಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹಾಗೂ ತಂಬಾಕು ಮಂಡಳಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೃತಜ್ಞತೆ ಸಲ್ಲಿಸಿದರು. ಈ ಪರಿಷ್ಕೃತ ನೆರವು ಪ್ರಾಕೃತಿಕ ವಿಕೋಪದಿಂದ ಸಂಕಷ್ಟಕ್ಕೊಳಗಾದ ತಂಬಾಕು ಬೆಳೆಗಾರರಿಗೆ ಸಕಾಲದಲ್ಲಿ ಆರ್ಥಿಕ ಬಲ ನೀಡುವುದರ ಜೊತೆಗೆ, ಅವರ ಜೀವನೋಪಾಯವನ್ನು ಪುನರುಜ್ಜೀವನಗೊಳಿಸಲು ನೆರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ನಿರ್ಧಾರವನ್ನು ಸ್ವಾಗತಿಸಿದ  ಯದುವೀರ್ ಅವರು, ಕರ್ನಾಟಕದ ತಂಬಾಕು ಬೆಳೆಗಾರರಿಗೂ ನ್ಯಾಯಸಮ್ಮತ ಬೆಂಬಲ ಬೆಲೆ ದೊರಕುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು, ಆಂಧ್ರ ಪ್ರದೇಶದ ತಂಬಾಕು ಬೆಳೆಗಾರರಿಗೆ ನೀಡಲಾಗುತ್ತಿರುವ ಪರಿಗಣನೆಯಂತೆಯೇ ಕರ್ನಾಟಕದ ತಂಬಾಕು ಬೆಳೆಗಾರರಿಗೂ ನ್ಯಾಯಯುತ ಮತ್ತು ಲಾಭದಾಯಕ ಬೆಂಬಲ ಬೆಲೆಯನ್ನು ನಿಗದಿಪಡಿಸುವಂತೆ ಮನವಿ ಮಾಡಿದ್ದಾರೆ. ಕರ್ನಾಟಕದ ರೈತರೂ ಸಮಾನ ಮಾನ್ಯತೆ ಮತ್ತು ರಕ್ಷಣೆಗೆ ಅರ್ಹರು ಎಂಬುದನ್ನು ಅವರು ಒತ್ತಿಹೇಳಿದರು.

ಪರಿಷ್ಕೃತ ಯೋಜನೆಯಡಿ ಅರ್ಹರಾಗಿರುವ ಮೈಸೂರು ಹಾಗೂ ಕೊಡಗು ಜಿಲ್ಲೆಯ ಎಲ್ಲಾ ತಂಬಾಕು ಬೆಳೆಗಾರರು ತಂಬಾಕು ಮಂಡಳಿಯ ಕಚೇರಿಗಳನ್ನು ಸಂಪರ್ಕಿಸಿ ಈ ಸೌಲಭ್ಯಗಳ ಪ್ರಯೋಜನ ಪಡೆಯುವಂತೆ ಯದುವೀರ್ ಅವರು ಮನವಿ ಮಾಡಿದರು. ರೈತರ ಹಿತಾಸಕ್ತಿ ಮತ್ತು ಜೀವನೋಪಾಯದ ರಕ್ಷಣೆಗಾಗಿ ಕೇಂದ್ರ ಸರ್ಕಾರದೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸುವ ತಮ್ಮ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

Key words: Mysore, MP Yaduveer, Increased, financial assistance, tobacco growers

The post ತಂಬಾಕು ಬೆಳೆಗಾರರಿಗೆ ಹೆಚ್ಚಿದ ಆರ್ಥಿಕ ನೆರವು: ಸಂಸದ ಯದುವೀರ್ ನಿರಂತರ ಪ್ರಯತ್ನಕ್ಕೆ ಸಿಕ್ಕ ಫಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രിയുടെ അന്തസ് കാറ്റില്‍ പറത്തി; വോട്ട് ചെയ്തവര്‍ക്ക് പോലും ദഹിക്കാത്ത കാഴ്ച: നടി തൃഷയ്ക്ക് മുന്‍ നിരയില്‍ സീറ്റ് നല്‍കിയതില്‍ ഡി.എം.കെ

ചെന്നൈ: തമിഴ്‌നാട് സ്വാതന്ത്ര്യ ദിനാഘോഷത്തില്‍ നടി തൃഷ കൃഷ്ണന്‍ പങ്കെടുത്തതില്‍ മുഖ്യമന്ത്രി...

'கைவிட்ட காவல்துறை; கட்டுக்கடங்காத கூட்டம்… உயிர்பிழைத்து வந்ததே..!'- விசிக மாநாட்டில் நடந்ததென்ன?

வி.சி.க-வின் தமிழ்த் தேசிய எழுச்சி மாநாடு கட்டுக்கடங்காத கூட்டத்தால் பாதியிலேயே கைவிடப்பட்டதும்,...

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

ಬೆಂಗಳೂರು,ಆಗಸ್ಟ್,18,2026 (www.justkannada.in):  ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ...