ಮಂಡ್ಯ,ಜುಲೈ,30,2026 (www.justkannada.in): ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನ ಸಿಡಬ್ಲ್ಯು ಎಂಎ ಎತ್ತಿಹಿಡಿದ ಬೆನ್ನಲ್ಲೆ ಮಂಡ್ಯದಲ್ಲಿ ಮತ್ತೆ ಆಕ್ರೋಶ ಭುಗಿಲೆದ್ದಿದೆ.
ಸಿಡಬ್ಲ್ಯು ಎಂಎ ಆದೇಶ ಖಂಡಿಸಿ ರೈತರು ಮಂಡ್ಯದ ಸಂಜಯ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ರಸ್ತೆ ಮಧ್ಯದಲ್ಲೇ ಟೈರ್ ಗೆ ಬೆಂಕಿ ಹಚ್ಚಲು ಮುಂದಾಗಿದ್ದು ಈ ವೇಳೆ ಪೊಲೀಸರು ಟೈರ್ ಅನ್ನು ಕಿತ್ತುಕೊಂಡಿದ್ದಾರೆ.
ಸಿಡಬ್ಲ್ಯು ಎಂಎ ವಿರುದ್ದ ಪ್ರತಿಭಟನಾನಿರತ ರೈತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
Key words: CWMA, orders, Protests, Mandya,
The post ತಮಿಳುನಾಡಿಗೆ ನೀರು ಬಿಡಲು CWMA ಆದೇಶ : ಮಂಡ್ಯದಲ್ಲಿ ಮತ್ತೆ ಪ್ರತಿಭಟನೆ ಶುರು, ರಸ್ತೆ ತಡೆದು ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





