6
August, 2026

A News 365Times Venture

6
Thursday
August, 2026

A News 365Times Venture

ಕಾನೂನು ತಜ್ಞರ ಸಲಹೆ ಮೇರೆಗೆ ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

Date:

 

ಬೆಂಗಳೂರು, ಆ. 02: “ಸಂಕಟ ಸೂತ್ರದ ವಿಚಾರದಲ್ಲಿ ಕಾನೂನನ್ನು ಗಮನದಲ್ಲಿಟ್ಟು ಕೊಂಡು ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ವಿಚಾರದಲ್ಲೂ ಕಾನೂನು ತಜ್ಞರ ಸಲಹೆ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಾವು ಆರಂಭಿಕ ಹಂತದಲ್ಲಿದ್ದು, ಮುಂಬರುವ ಜನವರಿ ತಿಂಗಳವರೆಗೂ ಪ್ರತಿ 15 ದಿನಕ್ಕೊಮ್ಮೆ ಕಾವೇರಿ ಸಮಿತಿ ಹಾಗೂ ಪ್ರಾಧಿಕಾರ ಸಭೆ ಮಾಡಲಿದ್ದಾರೆ. ಹೀಗಾಗಿ ನಾವು ಎಚ್ಚರ ವಹಿಸಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕಬಿನಿ ಜಲಾಶಯ ಭರ್ತಿ; ಸುರಕ್ಷತೆ ದೃಷ್ಟಿಯಿಂದ ನೀರು ಹರಿಸಿದ್ದೇವೆ

“ಈ ಹಿಂದಿನ ವರ್ಷಗಳಲ್ಲಿ ನಾವು ತಮಿಳುನಾಡಿಗೆ ಜೂನ್ ತಿಂಗಳಲ್ಲಿ 9.19 ಟಿಎಂಸಿ ನೀರು ಹಾರಿಸಿದ್ದೆವು. ಆದರೆ ಈ ವರ್ಷ 2.9 ಟಿಎಂಸಿ ನೀರು ಬಿಟ್ಟಿದ್ದೇವೆ. ಕಳೆದ ವರ್ಷ ಜುಲೈ ನಲ್ಲಿ 31 ಟಿಎಂಸಿ ನೀರು ಹರಿಸಲಾಗಿತ್ತು. ಈ ವರ್ಷ 0.7 ಟಿಎಂಸಿ ನೀರು ಮಾತ್ರ ಹರಿಸಿದ್ದೇವೆ. ನಾವು ಈ ವರ್ಷ ಈವರೆಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ನಾವು ಹರಿಸಿರುವುದು 3.6 ಟಿಎಂಸಿ ಮಾತ್ರ. ನಾವು ಈ ವರ್ಷ ಜಲಾಶಯಗಳಿಂದ ನೀರು ಬಿಟ್ಟಿಲ್ಲ. ಕಬಿನಿ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಅದರ ಸುರಕ್ಷತೆ ಹಿತದೃಷ್ಟಿಯಿಂದ ಅಣೆಕಟ್ಟು ಮೂಲಕ ನೀರು ಹರಿಸಲು ಆದೇಶ ನೀಡಿದ್ದೇವೆ” ಎಂದರು.

“ಈ ವಿಚಾರದಲ್ಲಿ ಎಲ್ಲಾ ಸಂಸದರು, ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದ್ದಾರೆ. ಆ ನಾಯಕರ ಸಲಹೆಗಳನ್ನು ಕಾನೂನು ಚೌಕಟ್ಟಿನಲ್ಲಿ ತಜ್ಞರು ಹಾಗೂ ಸಚಿವ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ಬಂದ್ ಕೈಬಿಡುವಂತೆ ಸಂಘಟನೆಗಳಲ್ಲಿ ಮನವಿ:

“ಕೆಲವು ಸಂಘ ಸಂಸ್ಥೆಗಳು ಪ್ರತಿಭಟನೆ ಮಾಡುತ್ತಿದ್ದಾರೆ. ದೇವರು ಕಳೆದ ಎರಡು ದಿನಗಳಿಂದ ಕೃಪೆ ತೋರಿದ ಪರಿಣಾಮ ಪರಿಸ್ಥಿತಿ ಶಾಂತವಾಗಿದೆ. ರೈತರು, ಕನ್ನಡ ಪರ ಎಲ್ಲಾ ಸಂಘಟನೆಗಳು ಆ. 13ರಂದು ಹಮ್ಮಿಕೊಂಡಿರುವ ಬಂದ್ ಅನ್ನು ಕೈ ಬಿಡಬೇಕು. ಸಂಘಟನೆ ಜೊತೆಗೆ ನಾನು ಹಾಗೂ ಸಚಿವರು ಚರ್ಚೆ ಮಾಡುತ್ತೇವೆ. ಬಂದ್ ಮಾಡುವುದರಿಂದ ಯಾವುದೇ ಪರಿಹಾರ ಸಿಗಲ್ಲ. ಸರ್ಕಾರವೇ ನಿಮ್ಮ ಪರವಾಗಿ ನಿಂತಿರುವಾಗ ಪ್ರತಿಭಟನೆ ಮಾಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ತಮಿಳುನಾಡಿನ ಹೆಜ್ಜೆಯನ್ನು ಗಮನಿಸುತ್ತೇವೆ:

“ತಮಿಳುನಾಡು ಸಂಕಟ ಸೂತ್ರದ ಬಗ್ಗೆ ಬೇಡಿಕೆ ಇಟ್ಟಿದ್ದು, ಡಿಎಂಕೆ ಖಾಸಗಿಯಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದನ್ನು ಕಾನೂನು ಚೌಕಟ್ಟಿನಲ್ಲಿ ಉತ್ತರ ನೀಡುತ್ತೇವೆ. ನನ್ನ ಅನುಭವದ ಪ್ರಕಾರ ಇಂತಹ ವಿಚಾರದಲ್ಲಿ ಖಾಸಗಿ ಅರ್ಜಿಗಳಿಗೆ ಮಾನ್ಯತೆ ನೀಡುವುದು ಬಹಳ ಕಡಿಮೆ. ನ್ಯಾಯಾಲಯ ವಿಚಾರದಲ್ಲಿ ಹಿರಿಯರ ಅನುಭವ ಪರಿಗಣಿಸಬೇಕು. ತಮಿಳುನಾಡು ಮುಂದೆ ಯಾವ ಹೆಜ್ಜೆ ಇಡುತ್ತದೆ ಎಂಬುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತೇವೆ. ಅವರು ಎಷ್ಟು ಕೃಷಿ ಭೂಮಿಗೆ ನೀರು ಬಳಸುತ್ತಾರೆ ಎಂಬುದನ್ನು ಗಮನಿಸುತ್ತೇವೆ” ಎಂದರು.

“ನೀರು ಹಂಚಿಕೆ ವಿಚಾರವಾಗಿ ಸಮಿತಿ ಹಾಗೂ ಪ್ರಾಧಿಕಾರ ನಿರಂತರವಾಗಿ ಮಾಹಿತಿ ಪಡೆದು ಸಭೆ ನಡೆಸಲಿದೆ. ಬರ ಪರಿಸ್ಥಿತಿ ಬಗ್ಗೆ ಪ್ರಧಾನಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಪತ್ರ ಬರೆದು ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ನಾವು ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಲು ಬಯಸುತ್ತೇವೆ. ಹೀಗಾಗಿ ರೈತರು, ಜನ ಪ್ರತಿನಿಧಿಗಳು, ಕಾನೂನು ತಜ್ಞರು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆಯಲಾಗುವುದು” ಎಂದರು.

ಆಗಸ್ಟ್ ಅಂತ್ಯದ ವೇಳೆ ವರದಿ ಪಡೆದು ಬರ ಘೋಷಣೆ ತೀರ್ಮಾನ

“ಬರದ ಘೋಷಣೆ ವಿಚಾರವಾಗಿ ನಾವು ಈಗಲೇ ತೀರ್ಮಾನ ಮಾಡಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಮಾಹಿತಿ ಪಡೆದ ಬಳಿಕ ಕಂದಾಯ ಸಚಿವರು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಶೀಲನೆ ಮಾಡುತ್ತಾರೆ. ನಂತರ ಸಚಿವ ಸಂಪುಟದಲ್ಲಿ ಮಂಡಿಸುತ್ತಾರೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು. ವಾಸ್ತವಾಂಶ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.

“ವಿರೋಧ ಪಕ್ಷದ ನಾಯಕರು ಬರ ಘೋಷಣೆ ಮಾಡಿ ಎಂದು ಹೇಳುತ್ತಿದ್ದರು. ಅವರು ಕಂದಾಯ ಸಚಿವರಾಗಿ ಅನುಭವ ಹೊಂದಿದ್ದಾರೆ. ಅವರು ರಾಜಕೀಯವಾಗಿ ಮಾತನಾಡಿದಾಗ ನಾವು ತಲೆ ಕೆಡಿಸಿಕೊಳ್ಳಲ್ಲ. ಈ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರು ಸಲಹೆ ನೀಡಿದರೆ ಅದನ್ನು ಸ್ವೀಕರಿಸಲು ಸರ್ಕಾರ ಮುಕ್ತವಾಗಿದೆ. ಯಾರು ಏನೇ ಸಲಹೆ ಇದ್ದರು ಉಪಮುಖ್ಯಮಂತ್ರಿಗಳ ಬಳಿ ನೀಡಬಹುದು” ಎಂದು ಹೇಳಿದರು.

Key words: Decision on, Supreme Court Appeal, Will Be Taken, Based on Legal Experts’ Advice, CM D.K. Shivakumar

SUMMARY:

Decision on Supreme Court Appeal Will Be Taken Based on Legal Experts’ Advice: CM D.K. Shivakumar

Bengaluru, Aug. 2: “On the issue of the distress-sharing formula, we will take a decision after examining the legal aspects and consulting legal experts. Even regarding the filing of an appeal before the Supreme Court, we will hold discussions based on the advice of legal experts before making a decision. We are currently in the initial stage, and the Cauvery Water Management Committee and the Cauvery Water Management Authority will hold meetings every 15 days until next January. Therefore, we must remain vigilant,” said Chief Minister D.K. Shivakumar.

The post ಕಾನೂನು ತಜ್ಞರ ಸಲಹೆ ಮೇರೆಗೆ ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നാളെ ആല്‍ഫയും ബീറ്റയും വരും! ജന്തര്‍ മന്ദറിലെ പ്രതിഷേധക്കാര്‍ക്കെതിരായ കേസുകള്‍ പിന്‍വലിക്കരുത്: സുപ്രീം കോടതിയില്‍ പൊതുതാത്പര്യ ഹരജി

ന്യൂദല്‍ഹി: സി.ജെ.പിയുടെ നേതൃത്വത്തില്‍ ജന്തര്‍ മന്ദറില്‍ നടന്ന വിദ്യാര്‍ത്ഥി പ്രക്ഷോഭത്തില്‍ പങ്കെടുത്തവര്‍ക്കെതിരായ...

மீனாட்சியம்மன் கோயில் கோயில் நில விவகாரம்; ராமநாதபுரம் மாவட்ட ஆட்சியரின் நேர்முக உதவியாளர் கைது

மதுரை மாநகர் கோரிப்பாளையம் ஹக்கிம் அஜ்மல்கான் சாலையில் அசோதா விலாஸ் பங்களா...

ಸಚಿವ ಬಿ.ನಾಗೇಂದ್ರ ರಾಜೀನಾಮೆ ಪಡೆಯದೇ ಸದನ ನಡೆಯಲು ನಾವು ಬಿಡಲ್ಲ- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಆಗಸ್ಟ್,5,2026 (www.justkannada.in): ವಾಲ್ಮೀಕಿ ನಿಗಮದ ಹಗರಣದಲ್ಲಿ ಕಳಂಕಿತರಾಗಿದ್ದ ಬಿ.ನಾಗೇಂದ್ರಗೆ ಸಚಿವ...