8
August, 2026

A News 365Times Venture

8
Saturday
August, 2026

A News 365Times Venture

ಬೆಂಗಳೂರು-ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Date:

ರಾಮನಗರ, ಆಗಸ್ಟ್, 8,2026 (www.justkannada.in):  ಬೆಂಗಳೂರು-ಮೈಸೂರು ದಶಪಥ ಎಕ್ಸ್‌ ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್‌ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದು ಈ ದುರ್ಘಟನೆ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕೇರಳದಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್, ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್ ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಪಲ್ಟಿಯಾಗಿದೆ.  ಪರಿಣಾಮವಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್‌ನಲ್ಲಿದ್ದ ಹಲವು  ಪ್ರಯಾಣಿಕರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭೀಕರ ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಘಟನೆ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  accident, Bengaluru-Mysore, highway

The post ಬೆಂಗಳೂರು-ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പോത്തുണ്ടി ഇരട്ടക്കൊലപാതകം: സുധാകരന്റെയും സജിതയുടെയും മക്കള്‍ക്ക് സര്‍ക്കാര്‍ ജോലി ഉറപ്പാക്കുമെന്ന് ആഭ്യന്തര മന്ത്രി

  പാലക്കാട്: പോത്തുണ്ടിയില്‍ ക്രൂരമായി കൊല്ലപ്പെട്ട സുധാകരന്റെയും സജിതയുടെയും മക്കളായ അഖില,...

திருவாரூர்: மன்னார்குடியில் தனியார் மருத்துவக் கல்லூரி? – முயற்சியில் பெண் பேராசிரியர்!

இந்தியாவில் மருத்துவக் கல்வியை விரிவுபடுத்தும் நோக்கத்தில் நாடு முழுவதும் புதிய அரசு...

KCR: స్వర్గీయ పెద్ది సుదర్శన్ రెడ్డి కుటుంబానికి కేసీఆర్ అండ.. రూ. 2.25 కోట్ల ఆర్థిక సాయం..

KCR: ఇటీవల అనారోగ్యంతో కన్నుమూసిన బీఆర్ఎస్ నాయకుడు, స్వర్గీయ పెద్ది సుదర్శన్...

മുസ്‌ലീം വിരുദ്ധ പരാമര്‍ശങ്ങള്‍ക്ക് തിരിച്ചടി; ട്രംപ് പിന്തുണച്ച നേതാവിന് തെരഞ്ഞെടുപ്പില്‍ തോല്‍വി

വാഷിങ്ടണ്‍: അമേരിക്കയില്‍ മുസ്‌ലീം വിരുദ്ധ പരാമര്‍ശങ്ങള്‍ നടത്തിയ റിപ്പബ്ലിക്കന്‍ കോണ്‍ഗ്രസ് അംഗം...