21
August, 2026

A News 365Times Venture

21
Friday
August, 2026

A News 365Times Venture

ಮಂಡ್ಯ ಕೃಷಿ ವಿವಿಯ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಹುದ್ದೆಗೆ ತೃತೀಯ ಲಿಂಗಿ ಆಯ್ಕೆ

Date:

ಮಂಡ್ಯ,ಆಗಸ್ಟ್, 21,2026 (www.justkannada.in): ತೃತೀಯ ಲಿಂಗಿ ಮೈನಾ ಹೆಚ್. ಅವರು ಮಂಡ್ಯ  ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರ (KVK)ದ ಸಹಾಯಕ (Assistant) ಹುದ್ದೆಗೆ ಆಯ್ಕೆಯಾಗಿದ್ದಾರೆ.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತು –ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಹುದ್ದೆಗೆ ನಡೆದ ನಿಗದಿತ  ನೇಮಕಾತಿ ಪ್ರಕ್ರಿಯೆಯಲ್ಲಿ ತೃತೀಯ ಲಿಂಗಿ ಮೈನಾ ಹೆಚ್. ಅವರು ನೇಮಕಗೊಂಡಿದ್ದಾರೆ.

ಮೈನಾ ಹೆಚ್. ಅವರು 2015ರಲ್ಲಿ B.T.L. Institute of Technology and Management ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಯನ್ನು ಶೇ. 71.73 ಅಂಕಗಳೊಂದಿಗೆ ಪೂರ್ಣಗೊಳಿಸಿದ್ದಾರೆ. ಖಾಸಗಿ ವಲಯದಲ್ಲಿ ವೃತ್ತಿ ಅನುಭವ ಪಡೆದ ನಂತರ, ನಿರಂತರ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯ ಮೂಲಕ ಸರ್ಕಾರಿ ಸೇವೆಗೆ ಆಯ್ಕೆಯಾಗಿದ್ದಾರೆ.

ತಮ್ಮ ಸಾಧನೆಯ ಕುರಿತು ಮಾತನಾಡಿದ ಮೈನಾ ಹೆಚ್. ಅವರು, “ಶಿಕ್ಷಣ, ಪರಿಶ್ರಮ, ಆತ್ಮವಿಶ್ವಾಸ ಮತ್ತು ನಿರಂತರ ಪ್ರಯತ್ನದಿಂದ ಸರ್ಕಾರಿ ಉದ್ಯೋಗ ಪಡೆಯಬೇಕೆಂಬ ನನ್ನ ಕನಸು ನನಸಾಗಿದೆ. ದೊರೆತಿರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ” ಎಂದು ಹೇಳಿದ್ದಾರೆ.

ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ. ಕೆ.ಸಿ. ನಾರಾಯಣಸ್ವಾಮಿ ಅವರು, ಮೈನಾ ಹೆಚ್. ಅವರನ್ನು ಅಭಿನಂದಿಸಿ, “ಶಿಕ್ಷಣ, ಸಾಮರ್ಥ್ಯ ಮತ್ತು ಪ್ರತಿಭೆಯ ಆಧಾರದ ಮೇಲೆ ಸರ್ಕಾರಿ ಸೇವೆಗೆ ಆಯ್ಕೆಯಾಗಿರುವ ಮೈನಾ ಅವರ ಸಾಧನೆ ಶ್ಲಾಘನೀಯ. ಕೃಷಿ ವಿಶ್ವವಿದ್ಯಾಲಯಗಳ ವ್ಯವಸ್ಥೆಯಲ್ಲಿ ತೃತೀಯ ಲಿಂಗದ ವ್ಯಕ್ತಿಯೊಬ್ಬರು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಅವರ ಸಾಧನೆಯು ತೃತೀಯ ಲಿಂಗದ ಯುವಜನರು ಶಿಕ್ಷಣ, ಉದ್ಯೋಗ ಮತ್ತು ಸ್ವಾವಲಂಬನೆಯತ್ತ ಮುನ್ನಡೆಯಲು ಪ್ರೇರಣೆಯಾಗಲಿದೆ ಎಂದು ತಿಳಿಸಿದ್ದಾರೆ.

Key words:  transgender, selected, post Assistant, Agricultural Science Center, Mandya

The post ಮಂಡ್ಯ ಕೃಷಿ ವಿವಿಯ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಹುದ್ದೆಗೆ ತೃತೀಯ ಲಿಂಗಿ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Arjun Reedy Ice Scene: ‘ఐస్ వేసుకునే సీన్’ రాగానే నిర్మాతలు ఆపెయ్యమనేవాళ్లు..!

Arjun Reedy Scene: టాలీవుడ్ సెన్సేషనల్ డైరెక్టర్ సందీప్ రెడ్డి వంగా...

ഓപ്പറേഷന്‍ തൂഫാന്‍: അറസ്റ്റില്‍ എറണാകുളം മുന്നില്‍; കേസുകളില്‍ കോഴിക്കോട് ഒന്നാമത്

  തിരുവനന്തപുരം: സംസ്ഥാനത്ത് ലഹരിക്കെതിരായ ശക്തമായ നടപടികളുമായി മുന്നേറുന്ന ഓപ്പറേഷന്‍ തൂഫാന്റെ...

'227 எம்.எல்.ஏக்கள்; 396 கார்கள்; ரூ.89 கோடி; யாரிடமெல்லாம் கார் இல்லை? – MLA's Cars Detailed Report

சட்டமன்ற உறுப்பினர்கள் அத்தனை பேருக்கும் கார் கொடுக்கப்போவதாக அறிவித்திருக்கிறார் முதல்வர் விஜய்....

Vizag Job Fraud: విశాఖలో కిలాడీ లేడీ.. నిరుద్యోగులకు కుచ్చుటోపీ!

యూరప్ దేశాల్లో ఉద్యోగాల పేరుతో నిరుద్యోగుల నుంచి భారీగా వసూలు చేసి.....