23
August, 2026

A News 365Times Venture

23
Sunday
August, 2026

A News 365Times Venture

3.85 ಕೋಟಿ ರೂ, ವಂಚನೆ ಆರೋಪ: ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ದ ದೂರು

Date:

ಬೆಂಗಳೂರು,ಆಗಸ್ಟ್,22,2026 (www.justkannada.in):   ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ರಾವ್ ಅವರ ವಿರುದ್ದ 3.85 ಕೋಟಿ ರೂ, ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ.

ಸಿನಿಮಾ ನಿರ್ಮಾಣದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಭಾಸ್ಕರ್ ಶೆಟ್ಟಿ  ಸೇರಿ ನಾಲ್ವರು ಓಂ ಪ್ರಕಾಶ್ ರಾವ್ ಅವರ ವಿರುದ್ದ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಬೆಂಗಳೂರು ಪೊಲೀಸ್ ಆಯುಕ್ತರಿಗೂ ದೂರು ನೀಡಲಾಗಿದೆ.

‘ಫಿನಿಕ್ಸ್’ ಎಂಬ ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿ ಓಂ ಪ್ರಕಾಶ್ ರಾವ್ ಅವರು ಭಾಸ್ಕರ್ ಶೆಟ್ಟಿ ಅವರಿಂದ ಒಟ್ಟು 3 ಕೋಟಿ 85 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಕೇವಲ ಆರು ತಿಂಗಳೊಳಗೆ ಸಂಪೂರ್ಣ ಹಣವನ್ನು ಹಿಂದಿರುಗಿಸುವುದಾಗಿ ಓಂ ಪ್ರಕಾಶ್ ಭರವಸೆ ನೀಡಿದ್ದರು. ಆದರೆ, ವ್ಯವಹಾರ ನಡೆದು ಮೂರು ವರ್ಷ ಕಳೆದರೂ ಹಣ ವಾಪಸ್ ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಾಗೆಯೇ  ‘ಹಣ ವಾಪಸ್ ಕೇಳಿದಾಗಲೆಲ್ಲಾ ನಿರ್ದೇಶಕ ಓಂಪ್ರಕಾಶ್ ರಾವ್ ಅವರು  ವಿವಿಧ ಕಾರಣಗಳನ್ನು ನೀಡಿ ಕಾಲಹರಣ ಮಾಡುತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ಅವರು ಸಂಪರ್ಕಕ್ಕೂ ಸಿಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ನನಗೆ ಸೇರಿದ ಹಣವನ್ನು ಕೇಳಲು ಓಂ ಪ್ರಕಾಶ್ ಅವರ ಮನೆಗೆ ತೆರಳಿದ್ದಾಗ, ಅಲ್ಲಿ ಬೆದರಿಕೆ ಹಾಕಲಾಗಿದೆ ಎಂದು ದೂರುದಾರ ಭಾಸ್ಕರ್ ಶೆಟ್ಟಿ ಆರೋಪಿಸಿದ್ದಾರೆ.

Key words: alleged, fraud,Complaint, against, director, Om Prakash Rao

The post 3.85 ಕೋಟಿ ರೂ, ವಂಚನೆ ಆರೋಪ: ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ದ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Pawan Kalyan: ‘నా అన్నయ్యే నా ఏకైక హీరో’.. ‘చిరు’ పుట్టినరోజున తమ్ముడు ఎమోషనల్ పోస్ట్..!

Pawan Kalyan: మెగాస్టార్ చిరంజీవి పుట్టినరోజు సందర్భంగా ఆయన తమ్ముడు, ఆంధ్రప్రదేశ్...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್...

ആൺകുട്ടികൾ ചെയ്താൽ കുഴപ്പമില്ല, പെൺകുട്ടികൾ ചെയ്‌താൽ സംസ്ക്കാരത്തിന് ചേരാത്തത്: മോഡിക്കെതിരെ രാഹുൽ ഗാന്ധി

പൂനെ: പെൺകുട്ടികൾ അധിക്ഷേപ വാക്കുകൾ ഉപയോഗിച്ചതിനെ മാത്രം ചൂണ്ടിക്കാട്ടി പ്രധാനമന്ത്രി നരേന്ദ്ര...

"கைப்புண்ணுக்கு கண்ணாடி எதற்கு?" – திமுக ஊழல் ஆதாரம் குறித்த கேள்விக்கு அருண்ராஜ் கிண்டல் பதில்

முழுமையாக 100 நாட்களைக் கடந்துவிட்ட த.வெ.க ஆட்சியில், தமிழக சட்டசபையில், ஆளுங்கட்சிக்கும்...