26
August, 2026

A News 365Times Venture

26
Wednesday
August, 2026

A News 365Times Venture

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

Date:

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆಯಾಗಿದೆ.

ಕೌಟುಂಬಿಕ ಕಲಹದಿಂದ ಮನನೊಂದ ತಾಯಿ ತನ್ನ ಐವರು ಮಕ್ಕಳೊಂದಿಗೆ ಭೂತನಾಳ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  ತಾಯಿ ಶೋಭಾ ಜಾಲಗೇರಿ (45) ಹಾಗೂ ಅವರ ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್‌ (10), ಸಾನಿಕಾ (7) ಮತ್ತು ವಿಕಾಸ್‌ (5) ಮೃತಪಟ್ಟವರು  ಎಂದು ಗುರುತಿಸಲಾಗಿದೆ.

ಮೃತರು ವಿಜಯಪುರ ಜಿಲ್ಲೆಯ ತೊರವಿ ಗ್ರಾಮದವರು ಎನ್ನಲಾಗಿದೆ. ಶೋಭಾ ಹಾಗೂ ಅವರ ಪತಿ ಭೀಮರಾಯ ಜಾಲಗೇರಿ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ನಡೆದಿತ್ತು ಎನ್ನಲಾಗಿದೆ. ಇದರಿಂದ ಮನನೊಂದಿದ್ದ ಶೋಭಾ, ಆ.24ರಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಐವರು ಮಕ್ಕಳೊಂದಿಗೆ ಮನೆಯಿಂದ ಬಂದಿದ್ದರು.

ಈ ಮಧ್ಯೆ ಇದೀಗ ತಾಯಿ ಮತ್ತು ಐವರು ಮಕ್ಕಳ ಶವ ಭೂತನಾಳ ಕೆರೆಯಲ್ಲಿ ಪತ್ತೆಯಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words: Vijayapur,  Bodies of 6 members, same family, found , lake

The post ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പുരുഷാധിപത്യത്തെ തകര്‍ക്കുക എന്നതിനെ എന്തിനാണ് ഹിന്ദു – മുസ് ലിം പ്രശ്‌നമാക്കുന്നത്: റിജിജുവിനോട് സൗരവ്

ന്യൂദല്‍ഹി: പുരുഷാധിപത്യത്തെ തകര്‍ക്കുക എന്ന രാഹുല്‍ ഗാന്ധിയുടെ പ്രസ്താവനക്കെതിരെ കേന്ദ്ര മന്ത്രി...

900 மாணவிகள்… மூன்றே கழிப்பறைகள்… தவிக்கும் புதுக்கோட்டை மாணவிகள்; முதல்வருக்கு கோரிக்கை

தமிழகத்தில் பல அரசுப் பள்ளிகள் மாணவர் சேர்க்கை இன்றி வெறிச்சோடிப் போய்க்கிடக்கும்...

Rahul Gandhi: కృతి సనన్‌ రక్షాబంధన్ యాడ్‌పై కంగనా విమర్శలు.. ఆమె ఇష్టమని రాహుల్‌గాంధీ మద్దతు

రక్షాబంధన్ సందర్భంగా బాలీవుడ్ నటి కృతి సనన్ చేసిన యాడ్ తీవ్ర...

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು...